ಹಾದಿಯಾ ತಂದೆ ಅಶೋಕನ್ 
ದೇಶ

ಕೇರಳ ಲವ್ ಜಿಹಾದ್: ಹಾದಿಯಾ ತಂದೆ ಬಿಜೆಪಿಗೆ ಸೇರ್ಪಡೆ

ಕೇರಳ ಲವ್ ಜಿಹಾದ್ ಪ್ರಕರಣದ ಮೂಲಕ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಯುವತಿ ಹಾದಿಯಾ ತಂದೆ ಅಶೋಕನ್ ಅವರು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಕೊಚ್ಚಿ: ಕೇರಳ ಲವ್ ಜಿಹಾದ್ ಪ್ರಕರಣದ ಮೂಲಕ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಯುವತಿ ಹಾದಿಯಾ ತಂದೆ ಅಶೋಕನ್ ಅವರು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಇಂದು ತಿರುವನಂತಪುರದಲ್ಲಿ ಕೆಎಂ ಅಶೋಕನ್ ಅವರು ಅಧಿಕೃತವಾಗಿ ಬಿಜೆಪಿ ಪಕ್ಷದ ಸದಸ್ಯತ್ವ ಪಡೆದಿದ್ದಾರೆ. ಬಿಜೆಪಿ ಸೇರ್ಪಡೆ ಬಳಿಕ ಮಾದ್ಯಮಗಳೊಂದಿಗೆ ಮಾತನಾಡಿದ ಅಶೋಕನ್ ಅವರು ನಾನು ಕಳೆದ ಮೂರು ವರ್ಷಗಳ ಹಿಂದೆಯೇ ಬಿಜೆಪಿ ಸೇರ್ಪಡೆಯಾಗಿದ್ದೆ. ಆದರೆ ಈಗ ನನಗೆ ಅಧಿಕೃತವಾಗಿ ಬಿಜೆಪಿ ಸದಸ್ಯತ್ವ ಸಿಕ್ಕಿದೆ ಎಂದು ಹೇಳಿದರು.
ಅಂತೆಯೇ ಇದಕ್ಕೂ ಮೊದಲು ನಾನು ಕಮ್ಯುನಿಸ್ಟ್ ಪಕ್ಷದಲ್ಲಿದ್ದೆ. ಆದರೆ ಪಕ್ಷದ ಸಿದ್ಧಾಂತಗಳು ಮತ್ತು ಅಜೆಂಡಾಗಳು ಇಷ್ಟವಾಗದೇ ಅಲ್ಲಿಂದ ಹೊರನಡೆದೆ ಎಂದು  ಹೇಳಿದರು. ಅಂತೆಯೇ ಶಬರಿಮಲೆ ವಿವಾದದ ಕುರಿತು ಬಿಜೆಪಿ ನಡೆಸುತ್ತಿರುವ ಹೋರಾಟದಲ್ಲೂ ಪಾಲ್ಗೊಳ್ಳುತ್ತೇನೆ ಎಂದು ಘೋಷಣೆ ಮಾಡಿರುವ ಅಶೋಕನ್ ಅವರು, ಶಬರಿಮಲೆ ವಿವಾದ ಸಂಬಂಧ ಸುಪ್ರೀಂ ಕೋರ್ಚ್ ನೀಡಿರುವ ತೀರ್ಪು ಮರು ಪರಿಶೀಲನೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ಈ ಹಿಂದೆ ತಮ್ಮ ಪುತ್ರಿ ಲವ್ ಜಿಹಾದ್ ಗೆ ಬಲಿಯಾಗಿದ್ದಾಳೆ ಎಂದು ಆರೋಪಿಸಿ ಅಶೋಕನ್ ಅವರು ಕೇರಳ ಹೈಕೋರ್ಟ್ ಮೊರೆ ಹೋಗಿದ್ದರು. ಇದೇ ದೇಶಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಹಾದಿಯಾ ಶಫೀನ್ ಜಹಾನ್ ಎಂಬ ವ್ಯಕ್ತಿಯನ್ನು ಪ್ರೀತಿಸಿ ವಿವಾಹವಾಗಿದ್ದರು. ಇದನ್ನು ವಿರೋಧಿಸಿದ್ದ ಅಶೋಕನ್ ಇದು ಲವ್ ಜಿಹಾದ್. ಹೀಗಾಗಿ ತಮ್ಮ ಪುತ್ರಿಯ ವಿವಾಹವನ್ನು ಮಾನ್ಯ ಮಾಡಬಾರದು ಎಂದು ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರು. ಅಶೋಕನ್ ಅವರಿಗೆ ಹಲವು ಹಿಂದೂಪರ ಸಂಘಟನೆಗಳು ಸಾಥ್ ನೀಡಿದ್ದವು. ಆದರೆ ಹಾದಿಯಾ ಪರ ಮತ್ತು ವಿರೋಧ ವ್ಯಾಪಕ ಪ್ರತಿಭಟನೆಗಳು ಕೂಡ ನಡೆದಿದ್ದವು. ಆದರೆ ಈ ಸಂಪಂಧ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್ ಹಾದಿಯಾಗೆ ತನ್ನ ಗಂಡನನ್ನು ಆಯ್ಕೆ ಮಾಡುವ ಮತ್ತು ಆತನೊಂದಿಗೆ ಬಾಳುವ ಎಲ್ಲಾ ರೀತಿಯ ಹಕ್ಕಿದೆ ಎಂದು ಮಹತ್ವದ ತೀರ್ಪು ನೀಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT