ಅರವಿಂದ್ ಕೇಜ್ರಿವಾಲ್ 
ದೇಶ

ಗುಜರಾತ್​​, ಮುಜಾಫರ್ ​​ನಗರ ಗಲಭೆಯ ಹಿಂದಿನ ಆರೋಪಿಗಳಿಗೂ ಶಿಕ್ಷೆಯಾಗಲಿ: ಕೇಜ್ರಿವಾಲ್

1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಅವರಿಗೆ ದೆಹಲಿ ಕೋರ್ಟ್ ಜೀವಾವಧಿ ಶಿಕ್ಷೆ....

ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಅವರಿಗೆ ದೆಹಲಿ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿರುವುದನ್ನು ಸ್ವಾಗತಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಅದೇ ರೀತಿ ಗುಜರಾತ್​​, ಮುಜಾಫರ್ ​​ನಗರ ಗಲಭೆಯ ಹಿಂದಿನ ಆರೋಪಿಗಳಿಗೂ ಶಿಕ್ಷೆಯಾಗಬೇಕು ಎಂದು ಮಂಗಳವಾರ ಒತ್ತಾಯಿಸಿದ್ದಾರೆ.
ಇಂದು ಎಎನ್ ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ದೆಹಲಿ ಸಿಎಂ, ಸಜ್ಜನ್ ಕುಮಾರ್ ಗೆ ಶಿಕ್ಷೆಯಾಗಿರುವುದು ಪ್ರಜಾಪ್ರಭುತ್ವಕ್ಕೆ ಸಂದ ಜಯ. ಅಪರಾಧಿಗೆ  ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ. ಸಿಖ್ ಹತ್ಯಾಕಾಂಡದ ಹಾಗೆಯೇ ಗುಜರಾತ್ ಗಲಭೆ ಮತ್ತು ಮುಜಾಫರ್ ​​ನಗರ ಗಲಭೆಯಲ್ಲಿ ಭಾಗಿಯಾಗಿರುವ ದೊಡ್ಡ ದೊಡ್ಡ ನಾಯಕರಿಗೂ ಜೀವಾವಧಿ ಶಿಕ್ಷೆಯಾಗಲಿ. ಇದಕ್ಕೆ ನ್ಯಾಯಾಂಗ ಮುಂದಾಗಬೇಕು ಎಂದಿದ್ದಾರೆ.
34 ವರ್ಷಗಳ ಬಳಿಕ ಸಿಖ್ ಸಮುದಾಯಕ್ಕೆ ನ್ಯಾಯ ಸಿಕ್ಕಿದೆ. ಈ ಹೈಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇವೆ. ಇದೇ ರೀತಿಯಲ್ಲಿ 2002 ರಲ್ಲಿ ಗುಜರಾತ್ ಗಲಭೆ, 2013 ರಲ್ಲಿ ಮಜಾಫರ್ ನಗರ ಗಲಭೆ ನಡೆಸಿದ ದೊಡ್ಡ ನಾಯಕರಿಗೂ ಶಿಕ್ಷೆಯಾಗಬೇಕು ಎಂದು ಕೇಜ್ರಿವಾಲ್ ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT