ಮುಕ್ತಾರ್ ಅಬ್ಬಾಸ್ ನಕ್ವಿ 
ದೇಶ

ಮಾತನಾಡಲು ಮನಮೋಹನ್ ಸಿಂಗ್ ಅವರಿಗೆ ಬೇರೆಯವರ ಸ್ಕ್ರಿಪ್ಟ್ ಬೇಕು, ಮೋದಿಗೆ ಬೇಕಿಲ್ಲ: ನಖ್ವಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಮಾತನಾಡಲು ಬೇರೆಯವರು ಬರೆದುಕೊಟ್ಟ ಸ್ಕ್ರಿಪ್ಟ್ ಬೇಕಾಗುತ್ತದೆ, ಆದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ...

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಮಾತನಾಡಲು ಬೇರೆಯವರು ಬರೆದುಕೊಟ್ಟ ಸ್ಕ್ರಿಪ್ಟ್ ಬೇಕಾಗುತ್ತದೆ, ಆದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮಾತನಾಡಲು ಯಾವುದೇ ಸ್ಕ್ರಿಪ್ಟ್ ಬೇಕಾಗಿಲ್ಲ ಎಂದು ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಕ್ವಿ ಹೇಳಿದ್ದಾರೆ.
ಕಾಂಗ್ರೆಸ್ ಹಿರಿಯ ನಾಯಕರಾದ ಸಿಂಗ್ ಮಾಧ್ಯಮಗಳೊಂದಿಗೆ ಮಾತನಾಡಲು ಯಾರೋ ಬರೆದು ಕೊಡಬೇಕು, ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಈ ಸ್ಕ್ರಿಪ್ಟ್ ಅವಶ್ಯಕತೆಯಿಲ್ಲ ಎಂದು ತಿಳಿಸಿದ್ದಾರೆ.
ಅವರು ಪ್ರಧಾನ ಮಂತ್ರಿಯಾಗಿದ್ದಾಗಲೂ ಬೇರೆಯವರು ಬರೆದುಕೊಟ್ಟಿದ್ದನ್ನು ಮಾತಾಡುತ್ತಿದ್ದರೂ, ಈಗಲು ಅದನ್ನೇ ಮಾಡುತ್ತಿದ್ದಾರೆ ಎಂದು ಸಿಂಗ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮಗಳ ಮುಂದೆ ಮಾತನಾಡಲು ಪ್ರಧಾನಿ ನರೇಂದ್ರ ಮೋದಿ ಹೆದರಬಹುದು ಆದರೆ ನಾನು ಎಂದಿಗೂ ಮಾಧ್ಯಮಗಳ ಮುಂದೆ ಮಾತನಾಡಲು ಹೆದರಿದಿಲ್ಲ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದರು. 
ಚೇನ್‌ಜಿಂಗ್ ಇಂಡಿಯಾ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಮನಮೋಹನ್ ಸಿಂಗ್ ಅವರು ಎಂತಹ ಪರಿಸ್ಥಿತಿಯಲ್ಲೂ ನಾನು ಮಾಧ್ಯಮಗಳ ಮುಂದೆ ಮಾತನಾಡಲು ಹೆದರಿರಲಿಲ್ಲ. ಆದರೆ ಇಂದಿನ ಪ್ರಧಾನಿ ಮಾಧ್ಯಮಗಳ ಮುಂದೆ ಮಾತನಾಡಲು ಹೆದರುತ್ತಿದ್ದಾರೆ ಎಂದು ಹೇಳಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ': AAP ಆರೋಪಗಳನ್ನು ತಳ್ಳಿಹಾಕಿದ ರಾಘವ್ ಚಡ್ಡಾ

Iran war ನಡುವೆಯೂ ಭಾರತ ದೇಶೀಯ ಮತ್ತು ಬಾಹ್ಯ ಸವಾಲುಗಳ ಯಶಸ್ವಿಯಾಗಿ ನಿರ್ವಹಿಸಿದೆ: EAM Jaishankar

ಇರಾನ್, ಅಮೆರಿಕದ ಎರಡು ಬಲಿಷ್ಠ ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ್ದು ಹೇಗೆ?, ಇಲ್ಲಿದೆ ಸ್ಫೋಟಕ ವಿಚಾರ!

ನಿತೀಶ್ ಕುಮಾರ್ ಪುತ್ರ ನಿಶಾಂತ್ ಮುಂದಿನ CM; ಪಾಟ್ನಾ ಜೆಡಿಯು ಕಚೇರಿ ಮುಂದೆ ಪೋಸ್ಟರ್‌!

ಮೈತ್ರಿಯಲ್ಲಿ ಬಿರುಕು, ಸಾಲ ವಾಪಸ್ ಕೇಳಿದ UAE; ತಿಂಗಳಾಂತ್ಯಕ್ಕೆ 3.5 ಬಿಲಿಯನ್ ಡಾಲರ್ ಪಾವತಿಸಬೇಕಿದೆ ಪಾಕ್!

SCROLL FOR NEXT