ಹಮೀದ್ ಅನ್ಸಾರಿ ಮತ್ತು ಸುಷ್ಮಾ ಸ್ವರಾಜ್ 
ದೇಶ

ಮೇರಿ ಮೇಡಂ ಮಹಾನ್: ಸುಷ್ಮಾ ಸ್ವರಾಜ್ ಕುರಿತು ಪಾಕ್ ನಿಂದ ಬಂದ ಹಮೀದ್ ಅನ್ಸಾರಿ ತಾಯಿ ಮೆಚ್ಚುಗೆ

ತನ್ನ ಸ್ನೇಹಿತೆಯನ್ನು ಭೇಟಿಯಾಗಲು ತೆರಳಿದ್ದಾಗ ಪಾಕಿಸ್ಥಾನದಲ್ಲಿ 8 ವರ್ಷಗಳಿಂದ ಬಂಧನಕ್ಕೊಳಗಾಗಿದ್ದ ಭಾರತೀಯ ಎಂಜಿನಿಯರ್‌ ಹಮೀದ್‌ ಅನ್ಸಾರಿ ...

ನವದೆಹಲಿ: ತನ್ನ ಸ್ನೇಹಿತೆಯನ್ನು ಭೇಟಿಯಾಗಲು ತೆರಳಿದ್ದಾಗ ಪಾಕಿಸ್ಥಾನದಲ್ಲಿ  8 ವರ್ಷಗಳಿಂದ ಬಂಧನಕ್ಕೊಳಗಾಗಿದ್ದ ಭಾರತೀಯ ಎಂಜಿನಿಯರ್‌ ಹಮೀದ್‌ ಅನ್ಸಾರಿ ಬಿಡುಗಡೆಗೊಂಡು ಮಂಗಳವಾರ ಭಾರತಕ್ಕೆ ವಾಪಸಾಗಿದ್ದಾರೆ,
ಭಾರತಕ್ಕೆ ವಾಪಾಸಾದ ನಂತರ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಭೇಟಿ ಮಾಡಿದರು, ಈ ವೇಳೆ ಅನ್ಸಾರಿ ತಾಯಿ ಮೇರಾ ಭಾರತ್ ಮಹಾನ್, ಮೇರಿ ಮೇಡಂ ಮಹಾನ್, ಸಬ್ ಮೇಡಂ ನೇ ಹಿ ಕಿಯಾ ಹಾಯ್ ಎಂದು ಘೋಷಣೆ ಕೂಗಿದರು.
2012ರಲ್ಲಿ ಸ್ನೇಹಿತೆಯನ್ನು ಭೇಟಿಯಾಗಲು ಆಫ್ಘಾನಿಸ್ತಾನ ಮೂಲಕ ಪಾಕಿಸ್ತಾನ ಪ್ರವೇಶಿಸಿದ್ದ ಮುಂಬೈ ನಿವಾಸಿ ಅನ್ಸಾರಿಯನ್ನು ಭಾರತದ ಗುಪ್ತಚರ ಇಲಾಖೆ ಸಿಬ್ಬಂದಿ ಎಂಬ ಗುಮಾನಿ ಮೇಲೆ ಪಾಕ್‌ ಸೆರೆಹಿಡಿದಿತ್ತು. 3 ವರ್ಷಗಳ ಅಧಿಕೃತ ಜೈಲು ಶಿಕ್ಷೆ ಸೇರಿ ಒಟ್ಟು 6 ವರ್ಷಗಳ ಕಾಲ ಅವರನ್ನು ಒತ್ತೆ ಇರಿಸಿಕೊಂಡಿತ್ತು. ಕಳೆದ ಡಿ.15ರಂದು ಬಿಡುಗಡೆ ಮಾಡಿತ್ತು. ಆದರೂ ಅವರ ದಾಖಲೆ ಪತ್ರಗಳು ಸಮರ್ಪಕವಾಗಿರಲಿಲ್ಲ ಎಂದು ಇಸ್ಲಾಮಾಬಾದ್‌ನಲ್ಲಿ ಅವರನ್ನು ಇರಿಸಲಾಗಿತ್ತು. ಕಡೆಗೂ ಮಂಗಳವಾರ ಅವರನ್ನು ಭಾರತಕ್ಕೆ ಕಳಿಸಿಕೊಟ್ಟಿದೆ.
8 ವರ್ಷಗಳ ನಂತರ ಹಮೀದ್ ಅನ್ಸಾರಿ  ತಮ್ಮ ಕುಟುಂಬಸ್ಥರ ಜೊತೆಗೆ ಒಂದಾಗಿದ್ದಾರೆ, ಸತತ ಹಲವು ವರ್ಷಗಳಿಂದ ಹೋರಾಟ ನಡೆಸಿ ಕೊನೆಗೂ ಭಾರತಕ್ಕೆ ಮರಳಿದ್ದಾರೆ. ತಮ್ಮ ಮಗ ಭಾರತಕ್ಕೆ ವಾಪಸಾಗಿರುವುದು  ಮಾನವೀಯತೆಗೆ ಸಿಕ್ಕ ನ್ಯಾಯ ಎಂದು ಅಮೀನ್ ಹನ್ಸಾರಿ ತಾಯಿ ಪೌಝಿಯಾ ನೇಹಾಲ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್, ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ 'ಕಾಗಿನೆಲೆ' ಸ್ವಾಮೀಜಿ!

ತಮಿಳು ನಾಡು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ TVK ಪಕ್ಷ ಸೇರಿದ ಸೆಂಗೊಟ್ಟೈಯನ್

ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಿದರೆ ಡಿಕೆಶಿಯನ್ನು CM ಆಗಿ ಒಪ್ಪಿಕೊಳ್ಳುವೆ : ಕುರ್ಚಿ ಕದನಕ್ಕೆ ಪರಮೇಶ್ವರ್ ಟ್ವಿಸ್ಟ್

CM ಪಟ್ಟಕ್ಕಾಗಿ ಕಿತ್ತಾಟ: ಡಿಕೆಶಿಗೆ 'ಹೈಕಮಾಂಡ್' ಒಲವು ತೋರಿದ್ರೆ, ಸಿದ್ದರಾಮಯ್ಯರ ಮುಂದಿನ ಪ್ಲಾನ್ ಏನು?

SCROLL FOR NEXT