ದರ್ಶನ ಪಡೆದ ತೃತೀಯ ಲಿಂಗಿಗಳು 
ದೇಶ

ಶಬರಿಮಲೆ: ದೇಗುಲ ಪ್ರಧಾನ ಅರ್ಚಕರ ಅನುಮತಿ ಮೇರೆಗೆ ಅಯ್ಯಪ್ಪನಿಗೆ ತೃತೀಯ ಲಿಂಗಿಗಳ ಪೂಜೆ

ತೀವ್ರ ಚರ್ಚೆಗೆ ಕಾರಣವಾಗಿರುವ ಶಬರಿಮಲೆಗೆ ನಾಲ್ಕು ಮಂದಿ ತೃತೀಯ ಲಿಂಗಿಗಳು ಪೂಜೆ ಸಲ್ಲಿಕೆ ಮಾಡಿ ಸುದ್ದಿಗೆ ಗ್ರಾಸವಾಗಿದ್ದಾರೆ.

ಕೊಚ್ಚಿ: ತೀವ್ರ ಚರ್ಚೆಗೆ ಕಾರಣವಾಗಿರುವ ಶಬರಿಮಲೆಗೆ ನಾಲ್ಕು ಮಂದಿ ತೃತೀಯ ಲಿಂಗಿಗಳು ಪೂಜೆ ಸಲ್ಲಿಕೆ ಮಾಡಿ ಸುದ್ದಿಗೆ ಗ್ರಾಸವಾಗಿದ್ದಾರೆ.
ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ನಾಲ್ವರು ತೃತೀಯ ಲಿಂಗಿಗಳು ಪೊಲೀಸ್ ಭದ್ರತೆಯೊಂದಿಗೆ ಪ್ರವೇಶಿಸಿ ಮಂಗಳವಾರ ಪೂಜೆ ಸಲ್ಲಿಸಿದ್ದಾರೆ. ಸಂಪ್ರದಾಯದಂತೆ ಕಪ್ಪು ಸೀರೆ ಧರಿಸಿ, ಇರುಮುಡಿ ಹೊತ್ತಿದ್ದ ತೃತೀಯ ಲಿಂಗಿಗಳಾದ ಅನನ್ಯ, ತೃಪ್ತಿ, ರೆಂಜುಮೊಲ್ ಹಾಗೂ ಅವಂತಿಕ ಎಂಬುವರು ಅಯ್ಯಪ್ಪನ ದರ್ಶನ ಪಡೆದರು. ಇವರಿಗೆ ನಿಲಕ್ಕಲ್‌ನಿಂದ ಪಂಪಾನದಿಯವರೆಗೂ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದರು.
ಇದೇ ನಾಲ್ಕು ಮಂದಿ ತೃತೀಯ ಲಿಂಗಿಗಳು ಸೋಮವಾರ ಶಬರಿಮಲೆ ಪ್ರವೇಶಕ್ಕೆ ಪ್ರಯತ್ನಿಸಿದ್ದರಾದರೂ ಪೊಲೀಸರು ಅವರನ್ನು ತಡೆದಿದ್ದರು. ಆದರೆ ಪಟ್ಟು ಬಿಡದ ತೃತೀಯ ಲಿಂಗಿಗಳು ಅಯ್ಯಪ್ಪನ ದರ್ಶನಕ್ಕೆ ಮುಂದಾಗಿದ್ದರು. ಬಳಿಕ ದೇಗುಲದ ಪ್ರಧಾನ ಅರ್ಚಕ ಅನುಮತಿ ಮೇರೆಗೆ ನಿನ್ನೆ ತೃತೀಯ ಲಿಂಗಿಗಳು ಅಯ್ಯಪ್ಪನ ದರ್ಶನ ಪಡೆದಿದ್ದಾರೆ.
ಅಯ್ಯಪ್ಪ ಸ್ವಾಮಿ ದರ್ಶನ ಪಡೆದು ಪೂಜೆ ಸಲ್ಲಿಸಲು ಅವಕಾಶ ದೊರೆತಿರುವುದಕ್ಕೆ ಅತೀವ ಸಂತಸ ವ್ಯಕ್ತಪಡಿಸಿರುವ ಅವರು, ಶಬರಿಮಲೆಗೆ ಅಯ್ಯಪ್ಪನ ದರ್ಶನ ಪಡೆಯುವುದು ನಮ್ಮ ಜೀವನದ ಗುರಿಯಾಗಿತ್ತು ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT