ರಾಮ್ ವಿಲಾಸ್ ಪಾಸ್ವನ್ 
ದೇಶ

ಸೀಟು ಹಂಚಿಕೆ ವಿಚಾರದಲ್ಲಿ ಅಸಮಾಧಾನ ಇಲ್ಲ- ರಾಮ್ ವಿಲಾಸ್ ಪಾಸ್ವನ್

ಸೀಟು ಹಂಚಿಕೆ ವಿಚಾರದಲ್ಲಿ ಬಿಜೆಪಿ ಹಾಗೂ ಎಲ್ ಜೆಪಿ ನಡುವೆ ಯಾವುದೇ ಅಸಮಾಧಾನವಿಲ್ಲ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ರಾಮ್ ವಿಲಾಸ್ ಪಾಸ್ವನ್ ಹೇಳಿದ್ದಾರೆ

ನವದೆಹಲಿ: ಸೀಟು ಹಂಚಿಕೆ ವಿಚಾರದಲ್ಲಿ ಬಿಜೆಪಿ ಹಾಗೂ ಎಲ್ ಜೆಪಿ ನಡುವೆ ಯಾವುದೇ ಅಸಮಾಧಾನವಿಲ್ಲ ಎಂದು ಕೇಂದ್ರ  ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ರಾಮ್ ವಿಲಾಸ್ ಪಾಸ್ವನ್ ಹೇಳಿದ್ದಾರೆ.

ಈ ವಿಚಾರದಲ್ಲಿ ಯಾವುದೇ ಭಿನ್ನಮತವಿಲ್ಲ, ಚಿರಾಗ್  ಎಲ್ ಜೆಪಿ ಸಂಸದೀಯ ಮಂಡಳಿ ಅಧ್ಯಕ್ಷನಾಗಿದ್ದು, ಈ ವಿಚಾರದ ಬಗ್ಗೆ ಆತ  ಮಾತುಕತೆ ನಡೆಸುವುದಾಗಿ ಹೇಳಿದರು.

ಸೀಟು ಹಂಚಿಕೆ ಸಂಬಂಧ  ರಾಮ್ ವಿಲಾಸ್ ಪಾಸ್ವನ್ ಪುತ್ರ ಹಾಗೂ ಸಂಸದ ಚಿರಾಗ್ ಪಾಸ್ವನ್ ಸಾರ್ವಜನಿಕವಾಗಿ ತನ್ನ ಅಭಿಪ್ರಾಯ ಹಂಚಿಕೊಂಡ ನಂತರ ಎನ್ ಡಿಎ ಹಾಗೂ ಲೋಕ ಜನಾಶಕ್ತಿ ಪಾರ್ಟಿ ನಡುವೆ ಎಲ್ಲವೂ ಸರಿಯಿಲ್ಲ ಎಂಬಂತಹ ಮಾತುಗಳು ಕೇಳಿಬರುತ್ತಿದ್ದವು.

ಈ  ಬಗ್ಗೆ  ರಾಮ್ ವಿಲಾಸ್ ಪಾಸ್ವನ್ ಸ್ಪಷ್ಟನೆ ನೀಡಿದ್ದಾರೆ.  ಬಿಜೆಪಿ ರಾಮಮಂದಿರದಂತಹ ಅನಗತ್ಯ ವಿಷಯಗಳಿಗೆ ಗಮನ ನೀಡುತ್ತಿದೆ. ಅಭಿವೃದ್ದಿಯಂತಹ ನೈಜ ವಿಷಯಗಳನ್ನು ಬಗೆ ತುರ್ತು ಕ್ರಮ ಕೈಗೊಳ್ಳಬೇಕೆಂದು ಚಿರಾಗ್ ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದರು.

 ಪಾಸ್ವಾನ್ ಹಾಗೂ ಚಿರಾಗ್  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸುವ ಸಾಧ್ಯತೆ ಇದೆ ಎಂಬುದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT