ಸಂಗ್ರಹ ಚಿತ್ರ 
ದೇಶ

ನೇಣಿಗೆ ಕೊರಳೊಡ್ಡಿದ್ದಂತೆಯೇ ಮಗುವಿಗೆ ಜನ್ಮವಿತ್ತ ತಾಯಿ! ಅನಾಥವಾಯ್ತು ಕಂದಮ್ಮ

ನಾಲ್ಕು ಮಕ್ಕಳ ತಾಯಿಯೊಬ್ಬಳು ತಾನು ಆತ್ಮಹತ್ಯೆಗೆ ಶರಣಾಗುತ್ತಿದ್ದಾಗಲೇ ಐದನೇ ಮಗುವಿಗೆ ಜನ್ಮನೀಡಿರುವ ಅಪೂರ್ವ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದೆ.

ಭೋಪಾಲ್" ನಾಲ್ಕು ಮಕ್ಕಳ ತಾಯಿಯೊಬ್ಬಳು ತಾನು ಆತ್ಮಹತ್ಯೆಗೆ ಶರಣಾಗುತ್ತಿದ್ದಾಗಲೇ ಐದನೇ ಮಗುವಿಗೆ ಜನ್ಮನೀಡಿರುವ ಅಪೂರ್ವ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದೆ/
ಮಧ್ಯಪ್ರದೇಶದ ಕಟ್ನಿ ಜಿಲ್ಲೆಯ ಲಕ್ಷ್ಮಿ ಠಾಕೂರ್ (36) ಹೀಗೆ ಆತ್ಮಹತ್ಯೆಗೆ ಶರಣಾದ ಮಹಿಳೆಯಾಫ಼್ಗಿದ್ದು ಆಕೆ ಸಾವನ್ನಪ್ಪುತ್ತಲೇ ಆಕೆಯ ಹೊಟ್ಟೆಯಲ್ಲಿದ್ದ ಕಂದಮ್ಮ ಈ ಜಗತ್ತನ್ನು ಪ್ರವೇಶಿಸಿದೆ. ಮಹಿಳೆ ಸಾಯುವ ಕಡೆ ಕ್ಷಣ ಅಥವಾ ಸತ್ತಮೇಲೆ ಪ್ರಸವವಾಗಿದ್ದು ಪೋಲೀಸರು ಶಿಶುವನ್ನು ರಕ್ಷಿಸಿದ್ದಾರೆ.
ಇಂತಹಾ ಪ್ರಕರಣ ಜಗತ್ತಿನಲ್ಲೇ ಇದೇ ಮೊದಲು ನಡೆದಿರಬಹುದು ಎಂದು ಪೋಲೀಸರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಗುರುವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು ಲಕ್ಷ್ಮಿಯ ಪತಿ ಸಂತೋಷ್ .ಪತ್ನಿ ಕೊತ್ಟಿಗೆಯಲ್ಲಿ ನೇಣು ಬಿಗಿದುಕೊಂಡಿರುವದನ್ನು ಕಂಡಿದ್ದು ಪೋಲೀಸರಿಗೆ ಮಾಹಿತಿ ನೀಡಿದ್ದಾನೆ. ಆಗ ಸ್ಥಳಕ್ಕೆ ಧಾವಿಸಿದ ಪೋಲೀಸರಿಗೆ ಅಚ್ಚರಿ ಕಾದಿತ್ತು. ಮೃತ ಮಹಿಳೆಯ ಕಾಲುಗಳ ಮಧ್ಯದಲ್ಲಿ ಸೀರೆಯಲ್ಲಿ ಸಿಲುಕಿಕೊಂಡಿದ್ದ ಹೊಕ್ಕಳು ಬಳ್ಳಿ ಸಹಿತವಾಗಿ ಆಗ ತಾನೆ ಜನಿಸಿದ ಮಗು ಅವರ ಕಣ್ಣಿಗೆ ಬಿದ್ದಿದೆ.
ಸಬ್ ಇನ್ಸಪೆಕ್ಟರ್ ಕವಿತಾ ಸಾಹ್ನಿ ತಕ್ಷಣ ಮಗು ಸಹಿತ ಶವವನ್ನು ಕೆಳಗಿಳಿಸಿಮಗುವನ್ನು ಸ್ವಚ್ಚಗೊಳಿಸಿ ತಾಯಿಯ ಮೃತದೇಹದ ಪಕ್ಕ ಇಟ್ಟಿದ್ದಾರೆ. ಬಳಿಕ ಆಗಮಿಸಿದ ವೈದ್ಯರು ಹೊಕ್ಕಳ ಬಳ್ಳಿಯನ್ನು ಕತ್ತರಿಸಿ ಶಿಶುವನ್ನು ತಾಯಿಯಿಂದ ಬೇರ್ಪಡಿಸಿದ್ದಾರೆ. ಸಧ್ಯ ಶಿಶುವನ್ನು ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿರಿಸಿದ್ದಾರೆ.
ಏತನ್ಮಧ್ಯೆ, ಒಂಬತ್ತು ತಿಂಗಳ ಗರ್ಭಿಣಿ ಲಕ್ಷ್ಮಿಏಕೆ ಆತ್ಮಹತ್ಯೆ ಮಾಡಿಕೊಂಡಳೆಂದು ಇನ್ನೂ ತಿಳಿದುಬಂದಿಲ್ಲ. ಇದಾಗಲೇ ನಾಲ್ಕು ಮಕ್ಕಳನ್ನು ಹೊಂದಿದ್ದ ಲಕ್ಷ್ಮಿ ಹಿರಿಯ ಮಗಳು 16 ವರ್ಷದವಳಾಗಿದ್ದಾಳೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗೋವಾ ನೈಟ್ ಕ್ಲಬ್​ನಲ್ಲಿ ಭೀಕರ ಅಗ್ನಿ ದುರಂತ: ಪ್ರವಾಸಿಗರು ಸೇರಿ 25 ಮಂದಿ ಸಜೀವ ದಹನ, ತನಿಖೆಗೆ ಆದೇಶ

Goa Nightclub Tragedy: ಡ್ಯಾನ್ಸ್ ಫ್ಲೋರ್‌ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಕನಿಷ್ಠ 100 ಮಂದಿ ಇದ್ದರು..!

ಕಾಂಗ್ರೆಸ್ ಕುರ್ಚಿ ಕದನ: ಸೋನಿಯಾ ಗಾಂಧಿ ನೇತೃತ್ವದ ಮಹತ್ವದ ಸಭೆ, ತೆಗೆದುಕೊಂಡ ನಿರ್ಧಾರವೇನು..?

ಗೋವಾ ನೈಟ್ ಕ್ಲಬ್​ ಅಗ್ನಿ ದುರಂತ: ಪ್ರಧಾನಿ ಮೋದಿ, ರಾಷ್ಟ್ರಪತಿ ತೀವ್ರ ಸಂತಾಪ, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

ಎಸ್‌ಸಿ-ಎಸ್‌ಟಿ ಕೋಟಾ ಹೆಚ್ಚಳಕ್ಕೆ ಪ್ರಧಾನಿ ಸಹಾಯ ಕೋರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಉಗ್ರಪ್ಪ ಒತ್ತಾಯ

SCROLL FOR NEXT