ಶಿವಸೇನೆ 
ದೇಶ

ರಾಮಾಯಣ ಪಾತ್ರಗಳು ಜಾತಿ ಪ್ರಮಾಣಪತ್ರ ಸಿದ್ಧಮಾಡಿಕೊಳ್ಳುವುದು ಉತ್ತಮ: ಶಿವಸೇನೆ

ಹನುಮಂತನ ಜಾತಿಯ ಬಗ್ಗೆ ಉತ್ತರ ಪ್ರದೇಶದಲ್ಲಿ ನಡೆಯುತ್ತಿದ್ದು, ಈ ಬಗ್ಗೆ ವ್ಯಂಗ್ಯ ಧಾಟಿಯಲ್ಲಿ ಪ್ರತಿಕ್ರಿಯೆ ನೀಡಿರುವ ಶಿವಸೇನೆ, ರಾಮಾಯಣದ ಪಾತ್ರಗಳು ಜಾತಿ ಪ್ರಮಾಣಪತ್ರವನ್ನು ಸಿದ್ಧಮಾಡಿಟ್ಟುಕೊಳ್ಳಬೇಕೆಂದು

ಮುಂಬೈ: ಹನುಮಂತನ ಜಾತಿಯ ಬಗ್ಗೆ ಉತ್ತರ ಪ್ರದೇಶದಲ್ಲಿ ನಡೆಯುತ್ತಿದ್ದು, ಈ ಬಗ್ಗೆ ವ್ಯಂಗ್ಯ ಧಾಟಿಯಲ್ಲಿ ಪ್ರತಿಕ್ರಿಯೆ ನೀಡಿರುವ ಶಿವಸೇನೆ, ರಾಮಾಯಣದ ಪಾತ್ರಗಳು ಜಾತಿ ಪ್ರಮಾಣಪತ್ರವನ್ನು ಸಿದ್ಧಮಾಡಿಟ್ಟುಕೊಳ್ಳಬೇಕೆಂದು ಹೇಳಿದೆ. 
ಹನುಮಂತನ ಜಾತಿಯ ಬಗ್ಗೆ ನಡೆಯುತ್ತಿರುವ ಚರ್ಚೆ ಅಸಮರ್ಥನೀಯವಾದದ್ದು. ಹನುಮಂತನಿಗೆ ಜಾತಿಪಟ್ಟಿ ಅಂಟಿಸುವ ಮೂಲಕ ಉತ್ತರ ಪ್ರದೇಶದಲ್ಲಿ ಹೊಸ ರಾಮಾಯಣವನ್ನು ಬರೆಯಲು ಹೊರಟಿದ್ದಾರೆ. ಈ ಪ್ರಯತ್ನವನ್ನು ತಡೆಯಬೇಕು. ಅಯೋಧ್ಯೆಯಲ್ಲಿ ರಾಮ ಮಂದಿರ ಇನ್ನಷ್ಟೇ ನಿರ್ಮಾಣವಾಗಬೇಕಿದೆ. ಆದರೆ ಬಿಜೆಪಿಯಲ್ಲಿ ಹನುನಂತನ ಜಾತಿಯ ಬಗ್ಗೆ ಚರ್ಚೆ ನಡೆಯಲು ಪ್ರಾರಂಭವಾಗಿದೆ. ಹನುಮಂತನ ಜಾತಿ, ಧರ್ಮದ ಬಗ್ಗೆ ಚರ್ಚೆ ನಡೆಸಿ ಏನಾಗಬೇಕಿದೆ? ಎಂದು ಸಾಮ್ನಾ ಪತ್ರಿಕೆ ಸಂಪಾದಕೀಯದಲ್ಲಿ ಶಿವಸೇನೆ ಪ್ರಶ್ನಿಸಿದೆ. 
ಇತ್ತೀಚೆಗಷ್ಟೇ ಮುಕ್ತಾಯಗೊಂಡ ಪಂಚ ರಾಜ್ಯಗಳ ಚುನಾವಣೆಯಲ್ಲಿ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹನುಮಂತ ದಲಿತನಾಗಿದ್ದ ಎಂದು ಹೇಳಿಕೆ ನೀಡಿದ್ದರು. ಇದಾದ ಬಳಿಕ ಹನುಮಂತ ನಮ್ಮ ಜಾತಿಗೆ ಸೇರಿದವನೆಂದು ಹಲವು ಹಕ್ಕು ಪ್ರತಿಪಾದನೆಗೆ ಮುಂದಾಗಿದ್ದರು. ಇದಾದ ಬಳಿಕ ಬಿಜೆಪಿಯ ಉತ್ತರ ಪ್ರದೇಶದ ಎಂಎಲ್ ಸಿ ನವಾಬ್, ಹನುಮಂತ ಮುಸ್ಲಿಂ ಸಮುದಾಯದ ಸೇರಿದವನೆಂದು ಹೇಳಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT