ರಾಜೀವ್ ಗಾಂಧಿ ಭಾರತ ರತ್ನ ವಾಪಸ್ ಗೆ ನಿರ್ಣಯ: ರಾಜೀನಾಮೆ ನೀಡುತ್ತೇನೆ- ಆಪ್ ಶಾಸಕಿ ಅಲ್ಕಾ ಲಾಂಬ 
ದೇಶ

ರಾಜೀವ್ ಗಾಂಧಿ ಭಾರತ ರತ್ನ ವಾಪಸ್ ಗೆ ನಿರ್ಣಯ: ರಾಜೀನಾಮೆ ನೀಡುತ್ತೇನೆ- ಆಪ್ ಶಾಸಕಿ ಅಲ್ಕಾ ಲಾಂಬ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ನೀಡಲಾಗಿದ್ದ ಭಾರತ ರತ್ನ ಪ್ರಶಸ್ತಿಯನ್ನು ಹಿಂಪಡೆಯಬೇಕೆಂಬ ನಿರ್ಣಯಕ್ಕೆ ಬೆಂಬಲಿಸದ ಆಮ್ ಆದ್ಮಿ ಪಕ್ಷದ ಶಾಸಕಿ ಅಲ್ಕಾ ಲಾಂಬ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ನೀಡಲಾಗಿದ್ದ ಭಾರತ ರತ್ನ ಪ್ರಶಸ್ತಿಯನ್ನು ಹಿಂಪಡೆಯಬೇಕೆಂಬ ನಿರ್ಣಯಕ್ಕೆ ಬೆಂಬಲಿಸದ ಆಮ್ ಆದ್ಮಿ ಪಕ್ಷದ ಶಾಸಕಿ ಅಲ್ಕಾ ಲಾಂಬ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. 
1984 ರ ಸಿಖ್ ವಿರೋಧಿ ವಿರೋಧಿ ದಂಗೆಗೆ ಸಂಬಂಧಿಸಿದಂತೆ ನಿರ್ಣಯ ಕೈಗೊಂಡಿದ್ದ ದೆಹಲಿ ವಿಧಾನಸಭೆಯಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ನೀಡಲಾಗಿರುವ ಭಾರತ ರತ್ನ ಪ್ರಶಸ್ತಿಯನ್ನು ಹಿಂಪಡೆಯಬೇಕೆಂಬ ಆಗ್ರಹ ಕೇಳಿಬಂದಿತ್ತು. ಆದರೆ ಆಪ್ ಶಾಸಕಿ ಅಲ್ಕಾ ಲಾಂಬ ಈ ನಿರ್ಣಯವನ್ನು ಬೆಂಬಲಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಸಿಎಂ ಅರವಿಂದ್ ಕೇಜ್ರಿವಾಲ್, ಅಲ್ಕಾ ಲಾಂಬ ರಾಜೀನಾಮೆಗೆ ಆಗ್ರಹಿಸಿದ್ದರು. 
ನಿರ್ಣಯವನ್ನು ಬೆಂಬಲಿಸುವಂತೆ ನನ್ನ ಮೇಲೆ ಒತ್ತಡ ಹೇರಲಾಗಿತ್ತು. ಆದರೆ ನಿರ್ಯಣಯವನ್ನು ನಾನು ಬೆಂಬಲಿಸಲಿಲ್ಲ ಎಂದು ಅಲ್ಕಾ ಲಾಂಬ ಹೇಳಿದ್ದಾರೆ. ನನ್ನ ನಿರ್ಧಾರಿಂದ ಉಂಟಾಗುವ ಪರಿಣಾಮಗಳನ್ನು ನಾನು ಎದುರಿಸುತ್ತೇನೆ, ಈ ಬಗ್ಗೆ ಸಿಎಂ ಕೇಜ್ರಿವಾಲ್ ಅವರೊಂದಿಗೆ ಮಾತನಾಡಿದ್ದೇನೆ. ರಾಜೀನಾಮೆ ನೀಡಲು ಆಗ್ರಹಿಸಿದ್ದಾರೆ ಎಂದು ಅಲ್ಕಾ ಲಾಂಬ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT