ಪಂಪಾ ಕ್ಯಾಂಪ್ ನಲ್ಲಿ ಮಹಿಳೆಯರಿಗೆ ಘೇರಾವ್ 
ದೇಶ

ಶಬರಿಮಲೆ ಪ್ರವೇಶಕ್ಕೆ ಯತ್ನಿಸಿದ 11 ಮಹಿಳೆಯರನ್ನು ತಡೆದ ಭಕ್ತರು, ಸ್ಥಳದಲ್ಲಿ ಬಿಗುವಿನ ವಾತಾವರಣ

ಶಬರಿಮಲೆ ಅಯ್ಯಪ್ಪ ದೇಗುಲ ಪ್ರವೇಶ ಮಾಡಲು ಪ್ರಯತ್ನಿಸಿದ 11 ಮಹಿಳೆಯರನ್ನು ಅಯ್ಯಪ್ಪ ಭಕ್ತರು ತಡೆದಿದ್ದು, ಪಂಪಾ ಬೇಸ್ ಕ್ಯಾಂಪ್ ನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಪಂಪಾ: ಶಬರಿಮಲೆ ಅಯ್ಯಪ್ಪ ದೇಗುಲ ಪ್ರವೇಶ ಮಾಡಲು ಪ್ರಯತ್ನಿಸಿದ 11 ಮಹಿಳೆಯರನ್ನು ಅಯ್ಯಪ್ಪ ಭಕ್ತರು ತಡೆದಿದ್ದು, ಪಂಪಾ ಬೇಸ್ ಕ್ಯಾಂಪ್ ನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಪ್ರಸ್ತುತ ಪೊಲೀಸ್ ಭದ್ರತೆಯಲ್ಲಿ ಪಂಪಾ ಕ್ಯಾಂಪ್ ತಲುಪಿರುವ ಎಲ್ಲ 11 ಮಹಿಳೆಯರೂ  50 ವರ್ಷದೊಳಗಿನವರಾಗಿದ್ದು ದೇವಸ್ಥಾನ ಪ್ರವೇಶಕ್ಕೆ ಮುಂದಾಗಿದ್ದರು. ಪ್ರತಿಭಟನಾಕಾರರು ಅವರನ್ನೆಲ್ಲ ಅರ್ಧದಲ್ಲೇ ತಡೆದಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮಹಿಳೆಯರು ಮನಿಟಿ ಎಂಬ ಸಂಘಟನೆಗೆ ಸೇರಿದವರಾಗಿದ್ದು, ಪೊಲೀಸ್​ ಬಿಗಿ ಭದ್ರತೆಯಲ್ಲಿ ಶಬರಿಮಲೆಯನ್ನು ತಲುಪಿದ್ದರು. ಆದರೆ ಇವರನ್ನು ನೋಡಿದ ಪ್ರತಿಭಟನಾಕಾರರು ಪಂಪಾ ಶಿಬಿರದ ಬಳಿಯೇ ತಡೆದಿದ್ದಾರೆ. 
ಈ ವೇಳೆ ಪೊಲೀಸರು ಮಹಿಳೆಯರಿಗೆ ಅಲ್ಲಿನ ಸ್ಥಿತಿ ವಿವರಿಸಲು ಯತ್ನಿಸಿದ್ದಾರೆ. ಇವ್ಯಾವುದನ್ನೂ ಕೇಳದ ಮಹಿಳೆಯರು ದೇವಸ್ಥಾನಕ್ಕೆ ಹೋಗಲೇಬೇಕು ಎಂದು ಹೇಳಿ ಮುಂದೆ ಹೊರಟಿದ್ದರು. ಇದನ್ನು ನೋಡಿದ ಭಕ್ತರು ಸೆಕ್ಷನ್​ 144 ಜಾರಿಯಲ್ಲಿದ್ದರೂ ಲೆಕ್ಕಿಸದೆ ಪ್ರತಿಭಟನೆ ನಡೆಸಿದರು. ಮುಂಜಾಗೃತಾ ಕ್ರಮವಾಗಿ ಬಸ್​ ಸಂಚಾರ ವ್ಯವಸ್ಥೆಯನ್ನು ಪೊಲೀಸರು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ. ಶಬರಿಮಲೆಯಲ್ಲಿ ವಾರ್ಷಿಕ ‘ಮಂಡಲ ಪೂಜೆ’ಗೆ ಕೆಲವೇ ದಿನಗಳು ಬಾಕಿ ಇರುವ ವೇಳೆಯಲ್ಲಿಯೇ ದೇವಸ್ಥಾನದ ಆವರಣದಲ್ಲಿ ಆತಂಕದ ಸ್ಥೀತಿ ಬುಗಿಲೆದ್ದಿದೆ. ದೇಗುಲಕ್ಕೆ ಭೇಟಿ ನೀಡುವ ಕುರಿತು ಈಗಾಗಲೇ ಕೇರಳ ಮುಖ್ಯಮಂತ್ರಿ ಕಚೇರಿಗೆ ಪತ್ರ ಬರೆಯಲಾಗಿದೆ ಎಂದು ಸಂಘಟನೆಯ ಸದಸ್ಯೆ ಸೆಲ್ವಿ ಹೇಳಿದ್ದಾರೆ. 
22-45 ವರ್ಷದವರೆಗಿನ ಸುಮಾರು 40 ಜನ ಸದಸ್ಯೆಯರು ಭಾನುವಾರ ಶಬರಿಮಲೆಗೆ ತೆರಳುತ್ತೇವೆ ಎಂದು ಚೆನ್ನೈ ಮೂಲದ ಮನಿಟಿ ಮಹಿಳಾ ಸಂಘಟನೆ ಶನಿವಾರವೇ ತಿಳಿಸಿತ್ತು. ನಾವೆಲ್ಲ ಸಂಪ್ರದಾಯಬದ್ಧವಾಗಿ ವ್ರತ ನಡೆಸಿದ್ದೇವೆ. ಇಲ್ಲಿಗೆ ಕಾರ್ಯಕರ್ತೆಯರಾಗಿ ಬಂದಿಲ್ಲ. ಯಾತ್ರಾರ್ಥಿಗಳಾಗಿ ಧಾವಿಸಿದ್ದೇವೆ. ದೇವಸ್ಥಾನದಲ್ಲಿ ಪೂಜೆ ನಡೆಸಬೇಕು. ಇದಕ್ಕಾಗಿ ನಮಗೆ ರಕ್ಷಣೆ ಬೇಕು ಎಂದು ಸಂಘಟನೆಯ ಎಲ್​.ವಸಂತಿ ತಿಳಿಸಿದ್ದರು.
ಶುಕ್ರವಾರ ಒಂದೇ ದಿನ 1,12,260 ಭಕ್ತಾದಿಗಳು ದರ್ಶನ ಪಡೆದುಕೊಂಡಿದ್ದು, ಈ ವರ್ಷದ ದಾಖಲೆಯಾಗಿದೆ. ಮುಂಬರುವ ದಿನಗಳಲ್ಲಿ ಭಕ್ತಾದಿಗಳ ಸಂಖ್ಯೆ ಮತ್ತಷ್ಟು ಹೆಚ್ಚುವ ನಿರೀಕ್ಷೆ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT