ಚೇತನ್ ಚೌಹಾಣ್ 
ದೇಶ

ಹನುಮಂತನ ಜಾತಿ ಬಗ್ಗೆ ಚರ್ಚೆ ಮಾಡಬೇಡಿ, ಆತ ಓರ್ವ ಕ್ರೀಡಾಪಟು ಆಗಿದ್ದ: ಮಾಜಿ ಕ್ರಿಕೆಟಿಗ ಚೇತನ್ ಚೌಹಾಣ್!

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಭಗವಾನ್ ಹನುಮಂತನ ಜಾತಿ ಚರ್ಚೆಗೆ ಈಗ ಮಾಜಿ ಕ್ರಿಕೆಟಿಗ ಚೇತನ್ ಚೌಹಾಣ್ ಎಂಟ್ರಿ ನೀಡಿದ್ದು, ಹನುಮಂತನ ಜಾತಿ ಬಗ್ಗೆ ಚರ್ಚೆ ಮಾಡಬೇಡಿ ಏಕೆಂದರೆ ಆತ ಓರ್ವ ಕ್ರೀಡಾಪಟು ಆಗಿದ್ದ ಎಂದು ಹೇಳಿದ್ದಾರೆ.

ಅಮ್ರೋಹಾ: ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಭಗವಾನ್ ಹನುಮಂತನ ಜಾತಿ ಚರ್ಚೆಗೆ ಈಗ ಮಾಜಿ ಕ್ರಿಕೆಟಿಗ ಚೇತನ್ ಚೌಹಾಣ್ ಎಂಟ್ರಿ ನೀಡಿದ್ದು, ಹನುಮಂತನ ಜಾತಿ ಬಗ್ಗೆ ಚರ್ಚೆ ಮಾಡಬೇಡಿ ಏಕೆಂದರೆ ಆತ ಓರ್ವ ಕ್ರೀಡಾಪಟು ಆಗಿದ್ದ ಎಂದು ಹೇಳಿದ್ದಾರೆ. 
ಹನುಮಂತನನ್ನು ಈಗಲೂ ಹಲವು ಕ್ರೀಡಾಪಟುಗಳು ಆರಾಧುಸುತ್ತಾರೆ, ಹನುಮಂತನ ಜಾತಿ ವಿಷಯದಲ್ಲಿ ಯಾವುದೇ ರಾಜಕೀಯ ಮಾಡಬಾರದು ಎಂದು ಚೇತನ್ ಚೌಹಾಣ್ ಅಭಿಪ್ರಾಯಪಟ್ಟಿದ್ದಾರೆ.  ಹನುಮಂತ ಓರ್ವ ಕ್ರೀಡಾಪಟು ಆಗಿದ್ದ, ಆತ ತನ್ನ ಶತ್ರುಗಳೊಂದಿಗೆ ಕುಸ್ತಿ ಮಾಡುತ್ತಿದ್ದ ಎಂದು ನಂಬಿದ್ದೇನೆ. ಶಕ್ತಿ ಹಾಗೂ ಸಾಮರ್ಥ್ಯಗಳಿಗಾಗಿ ಈಗಲೂ ಹಲವು ಕ್ರೀಡಾಪಟುಗಳು ಹನುಮಂತನನ್ನು ಆರಾಧಿಸುತ್ತಾರೆ ಎಂದು ಚೌಹಾಣ್ ಹೇಳಿದ್ದಾರೆ. 
ಯಾವುದೇ ಕ್ರೀಡಾಪಟುವೂ ಹನುಮಂತನನ್ನು ಆತನ ಜಾತಿ ಯಾವುದು ಎಂದು ನೋಡಿ ಆರಾಧಿಸುವುದಿಲ್ಲ. ಸಂತ, ಅತೀಂದ್ರಿಯ ಶಕ್ತಿಗಳಿಗೆ ಜಾತಿ ಇರುವುದಿಲ್ಲ. ಹಾಗೆಯೇ ಹನುಮಂತನಿಗೂ ಸಹ. ನಾನು ಆತನನ್ನು ದೇವರೆಂದು ಪರಿಗಣಿಸುತ್ತೇನೆ ಎಂದು ಚೌಹಾಣ್ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಒಪ್ಪಂದದ ಹೊರತಾಗಿಯೂ ಲೆಬನಾನ್ ಮೇಲೆ ಇಸ್ರೇಲ್ ದಾಳಿ: ರೊಚ್ಚಿಗೆದ್ದ ಇರಾನ್; ಹಾರ್ಮುಜ್ ಜಲಸಂಧಿ ಮತ್ತೆ ಬಂದ್!

ನೂತನ 'ಪ್ರಜಾ ಸೇವೆ ಇಲಾಖೆ' ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಸಭೆ ನಿರ್ಣಯ!

3rd ODI: 22 ವರ್ಷಗಳ ಹಳೆಯ ದಾಖಲೆ ಕೇವಲ 6 ಎಸೆತಗಳಲ್ಲಿ ಮುರಿದ ಭಾರತ

ರಕ್ತದೊತ್ತಡ: ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು!

Eetha First look OUT; ಹಿಂದೆಂದೂ ಕಂಡಿರದ ಹೊಸ ಅವತಾರದಲ್ಲಿ ಶ್ರದ್ಧಾ ಕಪೂರ್! ಫ್ಯಾನ್ಸ್ ಫಿದಾ, Video