ನರೇಂದ್ರ ಮೋದಿ 
ದೇಶ

ಮಹಾಮೈತ್ರಿ ರಚನೆ ಜನತೆಯ ಆಶೋತ್ತರಗಳಿಗಾಗಿ ಅಲ್ಲ, ವೈಯಕ್ತಿಕ ಆಸೆಗಳಿಗಾಗಿ: ಮೋದಿ

2019 ರ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ತಮ್ಮ ವಿರುದ್ಧದ ಕಾಂಗ್ರೆಸ್ ನೇತೃತ್ವದ ಮಹಾ ಮೈತ್ರಿ ವಿರುದ್ಧ ತೀವ್ರ ವಾಗ್ದಾಳಿಗೆ ಮುಂದಾಗಿದ್ದು, ಕಾಂಗ್ರೆಸ್ ನೇತೃತ್ವದಲ್ಲಿ

2019 ರ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ತಮ್ಮ ವಿರುದ್ಧದ ಕಾಂಗ್ರೆಸ್ ನೇತೃತ್ವದ ಮಹಾ ಮೈತ್ರಿ ವಿರುದ್ಧ ತೀವ್ರ ವಾಗ್ದಾಳಿಗೆ ಮುಂದಾಗಿದ್ದು,  ಕಾಂಗ್ರೆಸ್ ನೇತೃತ್ವದಲ್ಲಿ ಮಹಾ ಮೈತ್ರಿ ರಚನೆಯಾಗುತ್ತಿರುವುದು ಜನತೆಯ ಆಶೋತ್ತರಗಳಿಗಾಗಿ ಅಲ್ಲ, ವೈಯಕ್ತಿಕ ಲಾಭಕ್ಕಾಗಿ ಎಂದು ಆರೋಪಿಸಿದ್ದಾರೆ. 
ಚೆನ್ನೈ ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿರುವ ಮೋದಿ, ಇಂದು ಹಲವು ನಾಯಕರು ಮಹಾಘಟಬಂಧನದ ಬಗ್ಗೆ ಮಾತನಾಡುತ್ತಿದ್ದಾರೆ, ಈ ಮೈತ್ರಿ ವೈಯಕ್ತಿಕ ಅಸ್ಥಿತ್ವಕ್ಕಾಗಿ ರಚನೆಯಾಗುತ್ತಿರುವ ಮೈತ್ರಿ, ಸೈದ್ಧಾಂಕಿಕ ಬೆಂಬಲಕ್ಕಾಗಿ ರಚನೆಯಾಗುತ್ತಿರುವ ಮೈತ್ರಿ, ಅಧಿಕಾರಕ್ಕಾಗಿ, ವೈಯಕ್ತಿಕ ಲಾಭಕ್ಕಾಗಿ ನಡೆಯುತ್ತಿರುವ ಮೈತ್ರಿ ಎಂದು ವಾಗ್ದಾಳಿ ನಡೆಸಿದ್ದಾರೆ. 
ಇಂದು ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನದ್ಲಲಿರುವ ಹಲವು ನಾಯಕರು ಲೋಹಿಯ ಆವರಿಂದ ಸ್ಪೂರ್ತಿ ಪಡೆದಿರುವುದಾಗಿ ಹೇಳುತ್ತಿದ್ದಾರೆ. ಅದರೆ ಲೋಹಿಯಾ ಅವರೇ ಸ್ವತಃ ಕಾಂಗ್ರೆಸ್ ನ್ನು ವಿರೋಧಿಸಿದ್ದರು.  ಕಾಂಗ್ರೆಸ್ ನ ಮನಸ್ಥಿತಿ ಯಾರನ್ನೂ ಬಿಟ್ಟಿರಲಿಲ್ಲ. ಕಾಂಗ್ರೆಸ್ ಎಂಜಿ ರಾಮಚಂದ್ರನ್ ಅವರ ನೇತೃತ್ವದ  ಎಐಎಡಿಎಂಕೆ ಸರ್ಕಾರವನ್ನು ಜನಬೆಂಬಲ ಇದ್ದರೂ 1980 ರಲ್ಲಿ ಅಸ್ಥಿರಗೊಳಿಸಿತ್ತು, ಕಾಂಗ್ರೆಸ್ ಗೆ ವಿರುದ್ಧವಾಗಿ ತೆಲುಗು ದೇಶಂ ಪಕ್ಷ ಸ್ಥಾಪಿಸಿದ್ದ ಎನ್ ಟಿ ರಾಮ ರಾವ್ ಅವರ ಪಕ್ಷದವರು ಈಗ ಕಾಂಗ್ರೆಸ್ ಜೊತೆಗೆ ಕೈ ಜೋಡಿಸಲು ಮುಂದಾಗಿದ್ದಾರೆ ಎಂದು ಮೋದಿ ಕಾಂಗ್ರೆಸ್ ಹಾಗೂ ಮಹಾಮೈತ್ರಿ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT