ಹರ್ಯಾಣ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ 
ದೇಶ

ಮಂಜು ತಂದ ಅವಾಂತರ: ಹರ್ಯಾಣ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ 8 ಬಲಿ!

ಉತ್ತರ ಭಾರತದಲ್ಲಿ ಚಳಿಯ ರೌದ್ರಾವತಾರ ಮುಂದುವರೆದಿದ್ದು, ಗುರುಗಾಂವ್ ನಲ್ಲಿ ತಾಪಮಾನ ಶೂನ್ಯಕ್ಕೆ ಕುಸಿದ ಬೆನ್ನಲ್ಲೇ ಹರ್ಯಾಣದಲ್ಲಿ ಇದೇ ಚಳಿ ಮತ್ತು ರಸ್ತೆ ಮೇಲೆ ತೀವ್ರ ಮಂದು ಕವಿದಿದ್ದರಿಂದ ಸರಣಿ ಅಪಘಾತ ಸಂಭವಿಸಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದಾರೆ.

ಝಜ್ಜರ್: ಉತ್ತರ ಭಾರತದಲ್ಲಿ ಚಳಿಯ ರೌದ್ರಾವತಾರ ಮುಂದುವರೆದಿದ್ದು, ಗುರುಗಾಂವ್ ನಲ್ಲಿ ತಾಪಮಾನ ಶೂನ್ಯಕ್ಕೆ ಕುಸಿದ ಬೆನ್ನಲ್ಲೇ ಹರ್ಯಾಣದಲ್ಲಿ ಇದೇ ಚಳಿ ಮತ್ತು ರಸ್ತೆ ಮೇಲೆ ತೀವ್ರ ಮಂದು ಕವಿದಿದ್ದರಿಂದ ಸರಣಿ ಅಪಘಾತ ಸಂಭವಿಸಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದಾರೆ.
ಹರ್ಯಾಣದ ಝಜ್ಜರ್ ನಲ್ಲಿ ಈ ಸರಣಿ ಅಪಘಾತ ಸಂಭವಿಸಿದ್ದು, ಮಂಜು ಕವಿದಿದ್ದರಿಂದ ರಸ್ತೆ ಮೇಲಿದ್ದ ವಾಹನಗಳು ಕಾಣುತ್ತಿರಲಿಲ್ಲ. ಪರಿಣಾಮ ಬೃಹತ್ ಟ್ರಕ್ ವೊಂದು ತನ್ನ ಮುಂದಿದ್ದ ವಾಹನಗಳಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಸುಮಾರು 10ಕ್ಕೂ ಹೆಚ್ಚು ವಾಹನಗಳು ಈ ಅಪಘಾತದಲ್ಲಿ ಜಖಂಗೊಂಡಿದ್ದು, ದುರ್ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ.
ಟ್ರಕ್ ಮುಂದಿದ್ದ ಜೀಪ್ ನಲ್ಲಿ ಸಂಚರಿಸುತ್ತಿದ್ದ ಸುಮಾರು 5ಕ್ಕೂ ಹೆಚ್ಚು ಮಂದಿ ಈ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅಂತೆಯೇ ಘಟನೆಯಲ್ಲಿ ಹಲವರು ಗಾಯಗೊಂಡಿದ್ದು ಗಾಯಾಳುಗಳನ್ನು ಝಜ್ಜರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT