ಅಶುತೋಶ್ ರಾಣಾ, ಮಧುರ್ ಬಂಡಾರ್ಕರ್ 
ದೇಶ

ನಾಸಿರುದ್ದೀನ್ ಶಾ ಹೇಳಿಕೆ ಪರ ನಿಂತ ಅಶುತೋಶ್ ರಾಣಾ, ಮಧುರ್ ಬಂಡಾರ್ಕರ್

ಬುಲಂದ್ ಶಹರ್ ಹಿಂಸಾಚಾರದ ಬಗ್ಗೆ ಮಾತನಾಡುತ್ತಾ, ಭಾರತದಲ್ಲಿ ನನ್ನ ಮಕ್ಕಳ ಭವಿಷ್ಯದ ಬಗ್ಗೆ ಆತಂಕವಾಗುತ್ತಿದೆ ಎಂದು ಹೇಳಿದ್ದ ಬಾಲಿವುಡ್ ನಟ ನಾಸಿರುದ್ದೀನ್ ಶಾ ಹೇಳಿಕೆಯನ್ನು ಬಹುಭಾಷಾ ನಟರಾದ

ಬುಲಂದ್ ಶಹರ್ ಹಿಂಸಾಚಾರದ ಬಗ್ಗೆ ಮಾತನಾಡುತ್ತಾ, ಭಾರತದಲ್ಲಿ ನನ್ನ ಮಕ್ಕಳ ಭವಿಷ್ಯದ ಬಗ್ಗೆ ಆತಂಕವಾಗುತ್ತಿದೆ ಎಂದು ಹೇಳಿದ್ದ ಬಾಲಿವುಡ್ ನಟ ನಾಸಿರುದ್ದೀನ್ ಶಾ ಹೇಳಿಕೆಯನ್ನು ಬಹುಭಾಷಾ ನಟರಾದ ಅಶುತೋಶ್ ರಾಣಾ, ನಿರ್ದೇಶಕ ಮಧುರ್ ಬಂಡಾರ್ಕರ್ ಸಮರ್ಥಿಸಿದ್ದಾರೆ. 
ನಾಸಿರುದ್ದೀನ್ ಶಾ ಹೇಳಿಕೆಯ ಬಗ್ಗೆ ನಡೆಯುತ್ತಿರುವ ಚರ್ಚೆಗಳಿಗೆ ಪ್ರತ್ರಿಯೆ ನೀಡಿರುವ ಅಶುತೋಶ್ ರಾಣಾ ಮತ್ತು ಮಧುರ್ ಬಂಡಾರ್ಕರ್,  ತಮ್ಮ ವಿಚಾರಗಳನ್ನು ಹಂಚಿಕೊಳ್ಳುವುದಕ್ಕೆ ಪ್ರತಿಯೊಬ್ಬರಿಗೂ ಹಕ್ಕಿದೆ ಎಂದು ಹೇಳಿದ್ದಾರೆ. ಎಲ್ಲರೂ ತಮ್ಮ ವಿಚಾರವನ್ನು ಯಾವುದೇ ಭಯವಿಲ್ಲದೇ  ಸ್ನೇಹಿತರೊಂದಿಗೆ ಹಂಚಿಕೊಳ್ಳಬೇಕು ಅಂತಹ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯೆ ನೀಡುವಾಗ ಎಚ್ಚರಿಕೆಯಿಂದ ಇರಬೇಕು, ನಮ್ಮ ಸಹೋದರ, ಸ್ನೇಹಿತ ಏನನ್ನೋ ಹೇಳುತ್ತಿದ್ದಾನೆ ಎಂದರೆ ಅದನ್ನು ಕೇಳುವುದಷ್ಟೇ ಅಲ್ಲ ಅದರ ಬಗ್ಗೆ ಯೋಚನೆ ಮಾಡಬೇಕು ಎಂದು ರಾಣಾ ಮಾಧ್ಯಮಗಳಿಗೆ ಹೇಳಿದ್ದಾರೆ. 
ಸರಳತೆ ಮತ್ತು ಸೌಮ್ಯತೆ ಸ್ವಾತಂತ್ರ್ಯವನ್ನು ಪ್ರತಿನಿಧಿಸುತ್ತದೆ, ಅದೇ ನಮ್ಮ ಸಂಸ್ಕೃತಿಯೂ ಹೌದು ಎಂದು ಅಶುತೋಶ್ ರಾಣಾ ಹೇಳಿದ್ದಾರೆ. ಇದೇ ವೇಳೆ ಮಧುರ್ ಬಂಡಾರ್ಕರ್ ಸಹ ಶಾ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದು, ಪ್ರತಿಯೊಬ್ಬರಿಗೂ ಅವರದ್ದೇ ಆದ ದೃಷ್ಟಿಕೋನವಿರುತ್ತದೆ. ಪ್ರತಿಯೊಬ್ಬರಿಗೂ ಮಾತನಾಡುವ ಹಕ್ಕಿದೆ. ನಾವು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿದ್ದೇವೆ, ಆದರೆ ನಮಗೆ ಇಲ್ಲಿ ಭಯವಿದೆ ಅಂತ ಅನಿಸುವುದಿಲ್ಲ. ಭಾರತದಲ್ಲಿ ಎಲ್ಲರೂ ಸಮಾನರು ಹಾಗೂ ಅಸಹಿಷ್ಣುತೆ ಅಥವಾ ಇನ್ಯಾವುದೋ ಸಮಸ್ಯೆ ಇದೆ ಅಂತ ನನಗೆ ಅನಿಸುವುದಿಲ್ಲ ಎಂದು ಮಧುರ್ ಬಂಡಾರ್ಕರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT