ಸುಪ್ರೀಂ ಕೋರ್ಟ್ 
ದೇಶ

ಪಶ್ಚಿಮ ಬಂಗಾಳದಲ್ಲಿ ರಥಯಾತ್ರೆಗೆ ಅನುಮತಿ ಕೋರಿ ಬಿಜೆಪಿ ಅರ್ಜಿ: ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಪಶ್ಚಿಮ ಬಂಗಾಳದಲ್ಲಿ ರಥಯಾತ್ರೆ ನಡೆಸಲು ಅನುಮತಿ ನೀಡದ ಕೋಲ್ಕತ್ತಾ ಹೈಕೋರ್ಟ್ ವಿಭಾಗೀಯ ಪೀಠದ ಆದೇಶ ಪ್ರಶ್ನಿಸಿ....

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ರಥಯಾತ್ರೆ ನಡೆಸಲು ಅನುಮತಿ ನೀಡದ ಕೋಲ್ಕತ್ತಾ ಹೈಕೋರ್ಟ್ ವಿಭಾಗೀಯ ಪೀಠದ ಆದೇಶ ಪ್ರಶ್ನಿಸಿ ಬಿಜೆಪಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
ಪಶ್ಚಿಮ ಬಂಗಾಳದ ಮೂರು ಜಿಲ್ಲೆಗಳಲ್ಲಿ ರಥಯಾತ್ರೆ ಹಮ್ಮಿಕೊಳ್ಳುವ ನಿಟ್ಟಿನಲ್ಲಿ ತುರ್ತು ವಿಚಾರಣೆ ನಡೆಸುವಂತೆ ಬಿಜೆಪಿ ಮನವಿ ಮಾಡಿಕೊಂಡಿತ್ತು. ಆದರೆ ತುರ್ತು ವಿಚಾರಣೆ ನಡೆಸಲು ನಿರಾಕರಿಸಿದ ಕೋರ್ಟ್, ಪ್ರಕರಣವನ್ನು ಸಾಮಾನ್ಯ ಅರ್ಜಿಗಳೊಂದಿಗೆ ವಿಚಾರಣೆ ನಡೆಸುವುದಾಗಿ ತಿಳಿಸಿದೆ.
ಬಿಜೆಪಿ ರಥಯಾತ್ರೆಗೆ ಅನುಮತಿ ನೀಡಿ ಕೋಲ್ಕತ್ತಾ ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನು ಕಳೆದ ಶುಕ್ರವಾರ ರದ್ದುಗೊಳಿಸಿದ ವಿಭಾಗೀಯ ಪೀಠದ ಆದೇಶವನ್ನು ಬಿಜೆಪಿ ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸಿದೆ.
2019 ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿನ 42 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಪ್ರಜಾಪ್ರಭುತ್ವ ಉಳಿಸಿ ರಥಯಾತ್ರೆ ಹಮ್ಮಿಕೊಂಡಿದ್ದು, ಇದಕ್ಕೆ ಅನುಮತಿ ನೀಡುವಂತೆ ಸುಪ್ರೀಂಕೋರ್ಟ್ ನಲ್ಲಿ ಮನವಿ ಮಾಡಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿನಲ್ಲಿ ಸಿಎಂ ವಿಜಯ್ ಬಂಪರ್ ಘೋಷಣೆ: ವರ್ಷಕ್ಕೆ 3 ಉಚಿತ LPG ಸಿಲಿಂಡರ್; ಮಹಿಳೆಯರ ಉಚಿತ ಬಸ್ ಪ್ರಯಾಣ ವಿಸ್ತರಣೆ, ಪರಂದೂರು ವಿಮಾನ ನಿಲ್ದಾಣಕ್ಕೆ ಬ್ರೇಕ್..!

ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ: ಆಗಸ್ಟ್.31ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ವಾಲ್ಮೀಕಿ ನಿಗಮ ಹಗರಣ: ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ BJP ಬೃಹತ್ ಪ್ರತಿಭಟನೆ, ಅಶೋಕ್-ವಿಜಯೇಂದ್ರ ಸೇರಿ ಹಲವರು ಪೊಲೀಸರ ವಶಕ್ಕೆ..!

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!

ಇರಾನ್ ಉಸಿರುಗಟ್ಟಿಸಲು ಟ್ರಂಪ್ ಮಾಸ್ಟರ್ ಪ್ಲ್ಯಾನ್: ಆರ್ಥಿಕ 'ಡಿ-ಡೇ’ ಘೋಷಣೆ, ಅಮೆರಿಕ ಹೊಸ ನಿರ್ಬಂಧದಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಹೆಚ್ಚಿದ ಆತಂಕ..!