ಸಂಗ್ರಹ ಚಿತ್ರ 
ದೇಶ

ಪ್ರತಿಭಟನೆಗೆ ಹೆದರಲ್ಲ, ಶಬರಿಮಲೆಗೆ ಮತ್ತೆ ಬರುತ್ತೇವೆ: ಮಾನಿತಿ ಸಂಘಟನೆ

ಅಯ್ಯಪ್ಪ ಸ್ವಾಮಿ ಭಕ್ತರ ತೀವ್ರ ಪ್ರತಿಭಟನೆ ಹಿನ್ನಲೆಯಲ್ಲಿ ಶಬರಿಮಲೆಯಲ್ಲಿ ದರ್ಶನ ಪಡೆಯದೇ ವಾಪಸಾದ ಮಾನಿತಿ ಸಂಘಟನೆ ಸದಸ್ಯರು ಮತ್ತೆ ಶಬರಿಮಲೆಗೆ ಬರುತ್ತೇವೆ ಎಂದು ಸವಾಲು ಹಾಕಿದ್ದಾರೆ.

ಕೊಚ್ಚಿ: ಅಯ್ಯಪ್ಪ ಸ್ವಾಮಿ ಭಕ್ತರ ತೀವ್ರ ಪ್ರತಿಭಟನೆ ಹಿನ್ನಲೆಯಲ್ಲಿ ಶಬರಿಮಲೆಯಲ್ಲಿ ದರ್ಶನ ಪಡೆಯದೇ ವಾಪಸಾದ ಮಾನಿತಿ ಸಂಘಟನೆ ಸದಸ್ಯರು ಮತ್ತೆ ಶಬರಿಮಲೆಗೆ ಬರುತ್ತೇವೆ ಎಂದು ಸವಾಲು ಹಾಕಿದ್ದಾರೆ.
ಭಾನುವಾರ ಶಬರಿಮಲೆ ಬೆಟ್ಟದಲ್ಲಿ ನಡೆದ ಹೈಡ್ರಾಮಾ ಬಳಿಕ ಅಯ್ಯಪ್ಪಸ್ವಾಮಿ ದರ್ಶನವಿಲ್ಲದೇ ವಾಪಸ್ ಆಗಿದ್ದ ತಮಿಳುನಾಡಿನ ಮಾನಿತಿ ಸಂಘಟನೆಯ 11 ಮಹಿಳೆಯರು ಮತ್ತೆ ಕೇರಳ ಪೊಲೀಸರ ರಕ್ಷಣೆ ಪಡೆದು ಶಬರಿಮಲೆಗೆ ಬರುತ್ತೇವೆ ಎಂದು ಸವಾಲು ಹಾಕಿದ್ದಾರೆ.
ಶಬರಿಮಲೆಯಿಂದ ವಾಪಸ್ ತೆರಳುವಾಗ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಘಟನೆ ಸದಸ್ಯೆಯೊಬ್ಬರು, ಪ್ರಸ್ತುತ ಅಯ್ಯಪ್ಪ ಸ್ವಾಮಿ ದರ್ಶನ ಸಾಧ್ಯವಾಗಿಲ್ಲ. ಆದರೆ ತಮಗೆ ರಕ್ಷ ಣೆ ನೀಡಬೇಕೆಂದು ಕೋರಿ ನ್ಯಾಯಾಲಯದ ಮೆಟ್ಟಿಲೇರುತ್ತೇವೆ. ನ್ಯಾಯಾಲಯ ಮತ್ತು ಕೇರಳ ಪೊಲೀಸರಿಂದ ಭದ್ರತೆಯ ಆಶ್ವಾಸನೆ ದೊರೆತ ಬಳಿಕ ಮತ್ತೆ ಶಬರಿಮಲೆಗೆ ಬಂದು ಅಯ್ಯಪ್ಪ ಸ್ವಾಮಿ ದರ್ಶನ ಪಡೆಯುತ್ತೇವೆ ಎಂದು ಹೇಳಿದ್ದಾರೆ.
ಈ ಮಧ್ಯೆ ಭಾನುವಾರದ ಘಟನೆ ಮತ್ತೆ ರಾಜ್ಯ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಮಾತಿನ ಸಮರಕ್ಕೆ ಕಾರಣವಾಗಿದೆ. 'ಮಾನಿತಿ' ಸಂಘಟನೆಯ ಮಹಿಳೆಯರ ದೇಗುಲ ಪ್ರವೇಶ ಪೂರ್ವಯೋಜಿತವಾಗಿದ್ದು, ಇದಕ್ಕೆ ಆಡಳಿತಾರೂಢ ಸಿಪಿಐ-ಎಂ ನೇತೃತ್ವದ ಎಲ್ ಡಿಎಫ್‌ ಸರ್ಕಾರದ ಹಸ್ತಕ್ಷೇಪವಿದೆ ಎಂದು ಬಿಜೆಪಿ ಆರೋಪಿಸಿದೆ. ಇದಕ್ಕೆ ತಿರುಗೇಟು ನೀಡಿರುವ ಪಿಣರಾಯಿ ವಿಜಯನ್‌ ಸರ್ಕಾರ, ನ್ಯಾಯಾಲಯದ ಆದೇಶ ಪಾಲನೆ ಮಾಡುತ್ತಿರುವುದಾಗಿ ಸಮರ್ಥಿಸಿಕೊಂಡಿದೆ. ''ಹೈಕೋರ್ಟ್‌ ರಚಿಸಿರುವ ತ್ರಿಸದಸ್ಯ ಸಮಿತಿಯು ಈ ಪ್ರಕರಣವನ್ನು ಪರಿಶೀಲಿಸಲಿದ್ದು ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ಸಮಿತಿಯ ತೀರ್ಮಾನದಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ,'' ಎಂದು ಸಚಿವ ಕಡಕಂಪಲ್ಲಿ ಸುರೇಂದ್ರನ್‌ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT