ಸಾಂದರ್ಭಿಕ ಚಿತ್ರ 
ದೇಶ

ಚೆನ್ನೈ: ಫೇಸ್ ಬುಕ್ ಗೆಳೆಯನೊಂದಿಗೆ ಓಡಿಹೋಗಬೇಡ ಎಂದ ತಾಯಿಯನ್ನೇ ಕೊಂದ ಮಗಳು

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು, ತನ್ನ ಫೇಸ್ ಬುಕ್ ಗೆಳೆಯನೊಂದಿಗೆ ಓಡಿಹೋಗುವುದನ್ನು ತಡೆದ ಹೆತ್ತ ತಾಯಿಯನ್ನೇ ಕೊಲೆ...

ಚೆನ್ನೈ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು, ತನ್ನ ಫೇಸ್ ಬುಕ್ ಗೆಳೆಯನೊಂದಿಗೆ ಓಡಿಹೋಗುವುದನ್ನು ತಡೆದ ಹೆತ್ತ ತಾಯಿಯನ್ನೇ ಕೊಲೆ ಮಾಡಿದ ದಾರುಣ ಘಟನೆ ಸೋಮವಾರ ತಿರುವಳ್ಳೂರಿನಲ್ಲಿ ನಡೆದಿದೆ.
ಆಂಜನೇಯಪುರಂ ನಿವಾಸಿ, 19 ವರ್ಷದ ದೇವಿ ಪ್ರಿಯಾಗೆ ಆರು ತಿಂಗಳ ಹಿಂದಷ್ಟೇ ಫೇಸ್ ಬುಕ್ ನಲ್ಲಿ ವಿವೇಕ್ ಎಂಬ ಯುವಕ ಗೆಳೆಯನಾಗಿದ್ದ. ಇವರ ಸ್ನೇಹ ಪ್ರೀತಿಗೆ ತಿರುಗಿತ್ತು. ಇದನ್ನು ಗಮನಿಸಿದ ದೇವಿ ಪ್ರಿಯಾ ಪೋಷಕರು ಮಗಳು ಮನೆಯಿಂದ ಹೋಗದಂತೆ ಮತ್ತು ಮೊಬೈಲ್ ಬಳಸದಂತೆ ನಿರ್ಬಂಧ ಹಾಕಿದ್ದರು. ಈ ವಿಚಾರವನ್ನು ವಿವೇಕ್ ಗೆ ತಿಳಿಸಿದ ದೇವಿ ಪ್ರಿಯಾ, ಇಬ್ಬರು ಸೇರಿ ಓಡಿ ಹೋಗುವ ನಿರ್ಧಾರಕ್ಕೆ ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ವಿವೇಕ್ ನಿನ್ನೆ ದೇವಿ ಪ್ರಿಯಾಳನ್ನು ಕುಂಬಕೋಣಂಗೆ ಕರೆದುಕೊಂಡು ಬರುವಂತೆ ತನ್ನ ಇಬ್ಬರು ಸ್ನೇಹಿತರಾದ ವಿಗ್ನೇಶ್ ಮತ್ತು ಸತೀಶ್ ನನ್ನು ಆಕೆಯ ಮನೆಗೆ ಕಳುಹಿಸುತ್ತಾನೆ. ಪ್ರಿಯಾ ಸಹ ವಿಗ್ನೇಶ್ ಮತ್ತು ಸತೀಶ್ ರೊಂದಿಗೆ ಹೋಗಲು ಬ್ಯಾಗ್ ನೊಂದಿಗೆ ಸಿದ್ಧವಾಗುತ್ತಾಳೆ. ಆದರೆ ಮನೆ ಬಿಟ್ಟು ಹೋಗದಂತೆ ಆಕೆಯ ತಾಯಿ ಬಾನುಮತಿ ತಡೆಯುತ್ತಾಳೆ. ಈ ವೇಳೆ ಇಬ್ಬರು ನಡುವೆ ಜಗಳವಾಗಿದ್ದು, ಅದು ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ದೇವಿ ಪ್ರಿಯಾ, ತಾನು ಪ್ರಿಯಕರನೊಂದಿಗೆ ಓಡಿ ಹೋಗುವುದನ್ನು ತಡೆದ ತಾಯಿಯನ್ನು ಅಡುಗೆ ಮನೆಯಲ್ಲಿದ್ದ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ದೇವಿ ಪ್ರಿಯಾ, ವಿವೇಕ್, ವಿಗ್ನೇಶ್ ಮತ್ತು ಸತೀಶ್ ಅವರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT