15 ಗಣಿ ಕಾರ್ಮಿಕರು ಪರದಾಡುತ್ತಿದ್ದರೆ, ಮೋದಿ ಕ್ಯಾಮರಾಗಳಿಗೆ ಪೋಸ್ ನೀಡುತ್ತಿದ್ದಾರೆ: ರಾಹುಲ್ ಗಾಂಧಿ 
ದೇಶ

15 ಗಣಿ ಕಾರ್ಮಿಕರು ಪರದಾಡುತ್ತಿದ್ದರೆ, ಮೋದಿ ಕ್ಯಾಮರಾಗಳಿಗೆ ಪೋಸ್ ನೀಡುತ್ತಿದ್ದಾರೆ: ರಾಹುಲ್ ಗಾಂಧಿ

ಮೇಘಾಲಯದಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದ್ದ ಕಲ್ಲಿದ್ದಲು ಗಣಿಯಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ರಾಹುಲ್ ಗಾಂಧಿ ಪ್ರಧಾನಿ ವಿರುದ್ಧ ಟ್ವಿಟರ್ ನಲ್ಲಿ ಕಿಡಿ ಕಾರಿದ್ದಾರೆ.

ನವದೆಹಲಿ: ಮೇಘಾಲಯದಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದ್ದ ಕಲ್ಲಿದ್ದಲು ಗಣಿಯಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ರಾಹುಲ್ ಗಾಂಧಿ ಪ್ರಧಾನಿ ವಿರುದ್ಧ ಟ್ವಿಟರ್ ನಲ್ಲಿ ಕಿಡಿ ಕಾರಿದ್ದಾರೆ.
" ರಕ್ಷಣಾ ಕಾರ್ಯಾಚರಣೆಗೆ ಸಾಧನಗಳ ಕೊರತೆಯಾಗಿದ್ದು ಒಂದೆಡೆ ಗಣಿ ಕಾರ್ಮಿಕರು ಆಮ್ಲಜನಕವಿಲ್ಲದೇ ಪರದಾಡುತ್ತಿದ್ದರೆ, ಪ್ರಧಾನಿ ನರೇಂದ್ರ ಮೋದಿ ಫೋಟೊಗಳಿಗೆ ಪೋಸ್ ಕೊಡುತ್ತಿದ್ದಾರೆ" ಎಂದು ಟ್ವೀಟ್ ಮಾಡಿದ್ದಾರೆ.  ಕೇಂದ್ರ ಸರ್ಕಾರ ಮೇಘಾಲಯದಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಗೆ ಅಗತ್ಯವಿರುವ ಸಾಧನಗಳನ್ನು ಒದಗಿಸುವುದರತ್ತ ಗಮನ ಹರಿಸುತ್ತಿಲ್ಲ. " ಪ್ರಧಾನಮಂತ್ರಿಗಳೇ ದಯವಿಟ್ಟು ಗಣಿ ನೌಕರರನ್ನು ರಕ್ಷಿಸಿ ಎಂದು ಟ್ವೀಟ್ ಮಾಡುವ ಮೂಲಕ ರಾಹುಲ್ ಗಾಂಧಿ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದ್ದಾರೆ. 
ಮೇಘಾಲಯದಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಗಣಿಯಲ್ಲಿ 15 ಜನ ನೌಕರರು ಸಿಲುಕಿದ್ದು, ಗಣಿಪ್ರದೇಶದಲ್ಲಿ ನೀರು ಆವರಿಸಿಕೊಂಡಿರುವ ಪರಿಣಾಮ ನೌಕರರು ಅಪಾಯಕ್ಕೆ ಸಿಲುಕಿದ್ದಾರೆ. ಆದರೆ ಅಪಾರ ಪ್ರಮಾಣದ ನೀರನ್ನು ಹೊರತೆಗೆಯುವುದಕ್ಕೆ ಉಪಕರಣಗಲ ಕೊರತೆ ಎದುರಾಗಿದ್ದು ರಕ್ಷಣಾ ಕಾರ್ಯಾಚರಣೆ ನಿಧಾನವಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT