ಚಂದ್ರಶೇಖರ್ ರಾವ್, ನರೇಂದ್ರ ಮೋದಿ 
ದೇಶ

ಒಂದೆಡೆ ಫೆಡರಲ್ ಫ್ರಂಟ್ ರಚನೆ ಕಸರತ್ತು, ಮತ್ತೊಂದೆಡೆ ಮೋದಿ ಭೇಟಿ ಮಾಡಿದ ಕೆಸಿಆರ್

ಕಾಂಗ್ರೆಸ್ ಹಾಗೂ ಬಿಜೆಪಿ ಹೊರತಾದ ಫೆಡರಲ್ ಫ್ರಂಟ್ ರಚನೆಯ ಯತ್ನದ ಭಾಗವಾಗಿ ಇತ್ತೀಚಿಗಷ್ಟೇ ಪಶ್ಚಿಮ ಬಂಗಾಳ...

ನವದೆಹಲಿ: ಕಾಂಗ್ರೆಸ್ ಹಾಗೂ ಬಿಜೆಪಿ ಹೊರತಾದ ಫೆಡರಲ್ ಫ್ರಂಟ್ ರಚನೆಯ ಯತ್ನದ ಭಾಗವಾಗಿ ಇತ್ತೀಚಿಗಷ್ಟೇ ಪಶ್ಚಿಮ ಬಂಗಾಳ ಹಾಗೂ ಒಡಿಶಾ  ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದರು.
ಎರಡನೇ ಬಾರಿ ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿ ಪ್ರಧಾನಿಯನ್ನು ಭೇಟಿ ಮಾಡಿದ ಕೆಸಿಆರ್, ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.
ತೆಲಂಗಾಣದ 10 ಹಿಂದುಳಿದ ಜಿಲ್ಲೆಗಳ ಅಭಿವೃದ್ಧಿಗೆ ಹಣ, ತೆಲಂಗಾಣಕ್ಕೆ ಪ್ರತ್ಯೇಕ ಹೈಕೋರ್ಟ್​,  ಕೇಂದ್ರೀಯ ವಿದ್ಯಾಲಯಗಳು ಹಾಗೂ ಕರೀಂ ನಗರಕ್ಕೆ ಐಐಟಿ ನೀಡುವ ಕುರಿತಂತೆ ಕೆಸಿಆರ್ ಪ್ರಧಾನಿ ಜೊತೆ ಚರ್ಚಿಸಿದ್ದಾರೆ.
ಸದ್ಯ ದೆಹಲಿಯಲ್ಲಿರುವ ಕೆಸಿಆರ್ ಅವರು, ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT