ಜಪ್ತಿ ಮಾಡಿದ ವಸ್ತುಗಳನ್ನು ಸಾಗಿಸುತ್ತಿರುವ ಎನ್ಐಎ ಅಧಿಕಾರಿಗಳು 
ದೇಶ

ಐಎಸ್ಐಎಸ್ ಪ್ರಕರಣ: 10 ಶಂಕಿತ ಉಗ್ರರು 12 ದಿನ ಎನ್ಐಎ ವಶಕ್ಕೆ

ದೆಹಲಿ ಕೋರ್ಟ್ ಬುಧವಾರ ಬಂಧಿತರಾದ 10 ಶಂಕಿತ ಉಗ್ರರನ್ನು ಹೆಚ್ಚಿನ ವಿಚಾರಣೆಗಾಗಿ 12 ದಿನ ರಾಷ್ಟ್ರೀಯ ತನಿಖಾ....

ನವದೆಹಲಿ: ದೆಹಲಿ ಕೋರ್ಟ್ ಬುಧವಾರ ಬಂಧಿತರಾದ 10 ಶಂಕಿತ ಉಗ್ರರನ್ನು ಹೆಚ್ಚಿನ ವಿಚಾರಣೆಗಾಗಿ 12 ದಿನ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ಯ ವಶಕ್ಕೆ ನೀಡಿ ಗುರುವಾರ ಆದೇಶಿಸಿದೆ.
ನಿನ್ನೆ ಉತ್ತರ ಪ್ರದೇಶ ಹಾಗೂ ದೆಹಲಿಯಲ್ಲಿ ದಾಳಿ ನಡೆಸಿದ ಎನ್‌ಐಎ ಅಧಿಕಾರಿಗಳು, ಸ್ಫೋಟ ಹಾಗೂ ಆತ್ಮಾಹುತಿ ದಾಳಿಗೆ ಸಂಚು ರೂಪಿಸಿದ ಆರೋಪದ ಮೇಲೆ 10 ಶಂಕಿತ ಉಗ್ರರನ್ನು ಬಂಧಿಸಿದ್ದರು. ಇಂದು ಆ 10 ಆರೋಪಿಗಳನ್ನು ಕೋರ್ಟ್ ಗೆ ಹಾಜರುಪಡಿಸಿ, ವಿಚಾರಣೆಗಾಗಿ 15 ದಿನ ತಮ್ಮ ವಶಕ್ಕೆ ನೀಡುವಂತೆ ಎನ್ಐಎ ಮನವಿ ಮಾಡಿತು. ಆದರೆ ಕೋರ್ಟ್ 10 ದಿನ ಮಾತ್ರ ಎನ್ಐಎ ವಶಕ್ಕೆ ನೀಡಿದೆ.
ಎನ್ ಐಎ ಅಧಿಕಾರಿಗಳು ಬಂಧಿತರಿಂದ ರಾಕೆಟ್ ಲಾಂಚರ್, 12 ಪಿಸ್ತೂಲ್, 120 ಅಲಾರ್ಮ್ ಹಾಗೂ 25 ಕೆಜಿ ಸ್ಪೋಟಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.
ಐಎಸ್ಐಎಸ್ ಉಗ್ರ ಸಂಘಟನೆಯಿಂದ ಪ್ರೇರಿತವಾದ ಹರ್ಕತ್ ಉಲ್ ಹರ್ಬ್ ಇ-ಇಸ್ಲಾಂ ಎಂಬ ಉಗ್ರ ಸಂಘಟನೆ ದೆಹಲಿ ಮತ್ತುಉತ್ತರ ಪ್ರದೇಶದ ಪ್ರಮುಖ ಸ್ಥಳಗಳಲ್ಲಿ ಹಾಗೂ ಗಣ್ಯರನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂದು ಎನ್ಐಎ ಅಧಿಕಾರಿಗಳು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್