ರಾಜ್ಯದ ಸಂಸದರ ಪ್ರತಿಭಟನೆ 
ದೇಶ

ಮೇಕೆದಾಟು ಯೋಜನೆ: ಸಂಸತ್ತು ಭವನದ ಆವರಣದಲ್ಲಿ ರಾಜ್ಯದ ಸಂಸದರ ಧರಣಿ

ಕರ್ನಾಟಕದ ಮಹತ್ವಕಾಂಕ್ಷೆಯ ಮೇಕೆದಾಟು ಯೋಜನೆಗೆ ಅಡ್ಡಿಪಡಿಸುತ್ತಿರುವ ತಮಿಳುನಾಡು ಸರ್ಕಾರದ ನಡೆಯನ್ನು ವಿರೋಧಿಸಿ ರಾಜ್ಯ ಸಂಸದರು ಇಂದು ಸಂಸತ್ ಭವನದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಮುಂಭಾಗ ಇಂದು ಪ್ರತಿಭಟನೆ ನಡೆಸಿದರು.

ನವದೆಹಲಿ: ಕರ್ನಾಟಕದ ಮಹತ್ವಕಾಂಕ್ಷೆಯ ಮೇಕೆದಾಟು ಯೋಜನೆಗೆ  ಅಡ್ಡಿಪಡಿಸುತ್ತಿರುವ ತಮಿಳುನಾಡು ಸರ್ಕಾರದ ನಡೆಯನ್ನು ವಿರೋಧಿಸಿ ರಾಜ್ಯ ಸಂಸದರು ಇಂದು ಸಂಸತ್ ಭವನದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಮುಂಭಾಗ ಇಂದು ಪ್ರತಿಭಟನೆ ನಡೆಸಿದರು.

ಮೇಕೆದಾಟು ಯೋಜನೆಯನ್ನು ಶೀಘ್ರ ಕೈಗೆತ್ತಿಕೊಳ್ಳಲು ಕರ್ನಾಟಕ ಸರ್ಕಾರಕ್ಕೆ ಹಸಿರು ನಿಶಾನೆ ತೋರಬೇಕು ಎಂದು ಒತ್ತಾಯಿಸಿ ರಾಜ್ಯದ ಸಂಸದರು ಪಕ್ಷಾತೀತವಾಗಿ ಧರಣಿ ನಡೆಸಿದರು.

ಸಂಸದರಾದ ಡಿ. ಕೆ. ಸುರೇಶ್, ಶೋಭಾ ಕರಂದ್ಲಾಜೆ,  ಪ್ರಹ್ಲಾದ್ ಜೋಷಿ, ಪ್ರಕಾಶ್ ಹುಕ್ಕೇರಿ, ಸುರೇಶ್ ಅಂಗಡಿ, ಶಿವರಾಮೇಗೌಡ, ಧೃುವನಾರಾಯಣ್,  ಜಿ.ಎಂ. ಸಿದ್ದೇಶ್ವರ್, ರಾಜ್ಯಸಭಾ ಸದಸ್ಯರಾದ  ಬಿ. ಕೆ. ಹರಿಪ್ರಸಾದ್,  ರಾಜೀವ್ ಗೌಡ, ಡಾ. ಎಲ್. ಹನುಮಂತಯ್ಯ,  ಜಿ. ಸಿ. ಚಂದ್ರಶೇಖರ್,  ಸಿ, ನಸೀರ್ ಅಹ್ಮದ್,  ಉಪೇಂದ್ರ ರೆಡ್ಡಿ ಹಾಗೂ ರಾಜ್ಯ ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಮೇಕೆದಾಟು ಯೋಜನೆ ರಾಜ್ಯಕ್ಕೆ ಬೇಕು ಬೇಕು ಎಂದು ಘೋಷಣಾ ಫಲಕ ಪ್ರದರ್ಶಿಸಿದ ಪ್ರತಿಭಟನಾಕಾರರು, ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಯಾವುದೇ ತೊಂದರೆಯಾಗುವುದಿಲ್ಲ. ಆದಾಗ್ಯೂ, ತಮಿಳುನಾಡಿನ ಸಂಸದರು ಹಾಗೂ ಅಲ್ಲಿನ ಸರ್ಕಾರ  ವಿನಾಕಾರಣ  ಯೋಜನೆಗೆ ಅಡ್ಡಿಪಡಿಸುತ್ತಿರುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವರ್ತನೆ ಬದಲಿಸಿಕೊಳ್ಳಿ, ಒಪ್ಪಂದ ಸಂಪೂರ್ಣವಾಗಿ ಪಾಲಿಸಬೇಕು: ಇರಾನ್‌ಗೆ JD ವ್ಯಾನ್ಸ್ ಎಚ್ಚರಿಕೆ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: 7ರಲ್ಲಿ 5 ಸ್ಥಾನ ಕಾಂಗ್ರೆಸ್ ಪಾಲು, ಬಿಜೆಪಿಗೆ 2, ಜೆಡಿಎಸ್‌ಗೆ ಅಡ್ಡ ಮತದಾನದ ಆಘಾತ

ಪರಿಷತ್ ಚುನಾವಣೆ: ಬಿಜೆಪಿಯ 3 ಶಾಸಕರಿಂದ ಅಡ್ಡಮತದಾನ, ಸಿಕ್ಕೇ ಸಿಗ್ತಾರೆ.. ಶಿಸ್ತುಕ್ರಮ ಗ್ಯಾರಂಟಿ: R Ashok

BJP-JDS ಅಡ್ಡ ಮತದಾನದಿಂದ Congress 5ನೇ ಅಭ್ಯರ್ಥಿ ಜಯ; ಇದು ಪ್ರಜಾಪ್ರಭುತ್ವದ ಗೆಲುವು: ಸುರ್ಜೇವಾಲಾ

Bihar Horror: ಯಜಮಾನನ ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ, ಗುಪ್ತಾಂಗದಲ್ಲಿ ಜೀವಂತ ಬುಲೆಟ್, ಕಲ್ಲು, ಮರದ ತುಂಡು ಪತ್ತೆ!

SCROLL FOR NEXT