ಅರುಣ್ ಜೇಟ್ಲಿ- ಕುಮಾರಸ್ವಾಮಿ ಭೇಟಿ: ಜಿಎಸ್ ಟಿ ಪರಿಹಾರ ಅವಧಿ ವಿಸ್ತರಣೆ ಕೋರಿದ ಸಿಎಂ 
ದೇಶ

ಅರುಣ್ ಜೇಟ್ಲಿ ಭೇಟಿ ಮಾಡಿದ ಕುಮಾರಸ್ವಾಮಿ: ಜಿಎಸ್ ಟಿ ಪರಿಹಾರ ಅವಧಿ ವಿಸ್ತರಣೆ ಕೋರಿದ ಸಿಎಂ

ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ಡಿ.27 ರಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿ ಮಾಡಿದ್ದು, ರಾಜ್ಯಕ್ಕೆ ನೀಡಲಾಗುತ್ತಿರುವ ಜಿಎಸ್ ಟಿ ಪರಿಹಾರ ಅವಧಿಯನ್ನು 2025 ವರೆಗೆ

ನವದೆಹಲಿ: ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ಡಿ.27 ರಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿ ಮಾಡಿದ್ದು, ರಾಜ್ಯಕ್ಕೆ ನೀಡಲಾಗುತ್ತಿರುವ ಜಿಎಸ್ ಟಿ ಪರಿಹಾರ ಅವಧಿಯನ್ನು 2025 ವರೆಗೆ ವಿಸ್ತರಣೆ ಮಾಡುವಂತೆ ಮನವಿ ಸಲ್ಲಿಸಿದ್ದಾರೆ. 
ಜಿಎಸ್ ಟಿ ಜಾರಿಯ ನಂತರ ರಾಜ್ಯದ ಆದಾಯ ಕೊರತೆ ಶೇ.20 ರಷ್ಟು ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಉಂಟಾಗುತ್ತಿರುವ ನಷ್ಟವನ್ನು ಭರಿಸಲು ಜಿಎಸ್ ಟಿ ಪರಿಹಾರ ಅವಧಿಯನ್ನು 2025 ವರೆಗೆ ವಿಸ್ತರಿಸಬೇಕೆಂದು ಅರುಣ್ ಜೇಟ್ಲಿಗೆ ಸಿಎಂ ಮನವಿ ಮಾಡಿದ್ದಾರೆ. 
ಪ್ರಸ್ತುತ ಜಿಎಸ್ ಟಿ ಜಾರಿಯಾದ 5 ವರ್ಷಗಳ ವರೆಗೆ ರಾಜ್ಯಗಳಿಗೆ ಪರಿಹಾರ ನೀಡಲಾಗುತ್ತಿದ್ದು 2022 ವರೆಗೆ ಪರಿಹಾರ ಸಿಗಲಿದೆ. ರಾಜ್ಯಕ್ಕೆ ಜಿಎಸ್ ಟಿಯಿಂದ ಉಂಟಾಗಿರುವ ನಷ್ಟ 2022 ರ ನಂತರವೂ ಮುಂದುವರೆಯಲಿದ್ದು, ಹಲವು ಯೋಜನೆಗಳ ಜಾರಿಗೆ ಅಡ್ಡಿಯಾಗಲಿದೆ ಎಂದು ಜೇಟ್ಲಿ ಬಳಿ ಕುಮಾರಸ್ವಾಮಿ ವಿವರಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT