ಅರುಣ್ ಜೇಟ್ಲಿ- ಕುಮಾರಸ್ವಾಮಿ ಭೇಟಿ: ಜಿಎಸ್ ಟಿ ಪರಿಹಾರ ಅವಧಿ ವಿಸ್ತರಣೆ ಕೋರಿದ ಸಿಎಂ 
ದೇಶ

ಅರುಣ್ ಜೇಟ್ಲಿ ಭೇಟಿ ಮಾಡಿದ ಕುಮಾರಸ್ವಾಮಿ: ಜಿಎಸ್ ಟಿ ಪರಿಹಾರ ಅವಧಿ ವಿಸ್ತರಣೆ ಕೋರಿದ ಸಿಎಂ

ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ಡಿ.27 ರಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿ ಮಾಡಿದ್ದು, ರಾಜ್ಯಕ್ಕೆ ನೀಡಲಾಗುತ್ತಿರುವ ಜಿಎಸ್ ಟಿ ಪರಿಹಾರ ಅವಧಿಯನ್ನು 2025 ವರೆಗೆ

ನವದೆಹಲಿ: ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ಡಿ.27 ರಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿ ಮಾಡಿದ್ದು, ರಾಜ್ಯಕ್ಕೆ ನೀಡಲಾಗುತ್ತಿರುವ ಜಿಎಸ್ ಟಿ ಪರಿಹಾರ ಅವಧಿಯನ್ನು 2025 ವರೆಗೆ ವಿಸ್ತರಣೆ ಮಾಡುವಂತೆ ಮನವಿ ಸಲ್ಲಿಸಿದ್ದಾರೆ. 
ಜಿಎಸ್ ಟಿ ಜಾರಿಯ ನಂತರ ರಾಜ್ಯದ ಆದಾಯ ಕೊರತೆ ಶೇ.20 ರಷ್ಟು ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಉಂಟಾಗುತ್ತಿರುವ ನಷ್ಟವನ್ನು ಭರಿಸಲು ಜಿಎಸ್ ಟಿ ಪರಿಹಾರ ಅವಧಿಯನ್ನು 2025 ವರೆಗೆ ವಿಸ್ತರಿಸಬೇಕೆಂದು ಅರುಣ್ ಜೇಟ್ಲಿಗೆ ಸಿಎಂ ಮನವಿ ಮಾಡಿದ್ದಾರೆ. 
ಪ್ರಸ್ತುತ ಜಿಎಸ್ ಟಿ ಜಾರಿಯಾದ 5 ವರ್ಷಗಳ ವರೆಗೆ ರಾಜ್ಯಗಳಿಗೆ ಪರಿಹಾರ ನೀಡಲಾಗುತ್ತಿದ್ದು 2022 ವರೆಗೆ ಪರಿಹಾರ ಸಿಗಲಿದೆ. ರಾಜ್ಯಕ್ಕೆ ಜಿಎಸ್ ಟಿಯಿಂದ ಉಂಟಾಗಿರುವ ನಷ್ಟ 2022 ರ ನಂತರವೂ ಮುಂದುವರೆಯಲಿದ್ದು, ಹಲವು ಯೋಜನೆಗಳ ಜಾರಿಗೆ ಅಡ್ಡಿಯಾಗಲಿದೆ ಎಂದು ಜೇಟ್ಲಿ ಬಳಿ ಕುಮಾರಸ್ವಾಮಿ ವಿವರಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT