ಅನುಪಮ್ ಖೇರ್ 
ದೇಶ

ಜಲಿಯನ್ವಾಲಾಬಾಗ್, ಹತ್ಯಾಕಾಂಡ ಕುರಿತು ಚಿತ್ರ ಮಾಡಿದಾಗ ಸತ್ಯ ಸಂಗತಿ ಬದಲಿಸಲಾಗದು: ಅನುಪಮ್ ಖೇರ್

ಜಲಿಯನ್ವಾಲಾಬಾಗ್ ಅಥವಾ ಹತ್ಯಾಕಾಂಡ ಕುರಿತು ಚಿತ್ರಗಳನ್ನು ಮಾಡಿದಾಗ ಸತ್ಯಗಳನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ನಟ ಅನುಪಮ್ ಖೇರ್ ಅವರು ಶುಕ್ರವಾರ ಹೇಳಿದ್ದಾರೆ...

ಮುಂಬೈ: ಜಲಿಯನ್ವಾಲಾಬಾಗ್ ಅಥವಾ ಹತ್ಯಾಕಾಂಡ ಕುರಿತು ಚಿತ್ರಗಳನ್ನು ಮಾಡಿದಾಗ ಸತ್ಯಗಳನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ನಟ ಅನುಪಮ್ ಖೇರ್ ಅವರು ಶುಕ್ರವಾರ ಹೇಳಿದ್ದಾರೆ. 
 ಡಾ.ಮನಮೋಹನ್ ಸಿಂಗ್ ಅವರ ಜೀವನಾಧಾರಿತ ಚಿತ್ರ 'ದಿ ಆ್ಯಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್' ಚಿತ್ರ ಕುರಿತು ಎದ್ದಿರುವ ವಿವಾದ ಕುರಿತು ಪ್ರತಿಕ್ರಿಯೆ ನೀಡಿರುವ ಅವರು,  ಸಂಜಯ ಬರು ಅವರು ಬರೆದಿರುವ ಪುಸ್ತಕವನ್ನು ಆಧರಿಸಿ ಚಿತ್ರವನ್ನು ನಿರ್ಮಾಣ ಮಾಡಲಾಗಿದೆ. ಜಲಿಯನ್ವಾಲಾಬಾಗ್, ಹತ್ಯಾಕಾಂಡ ಅಥವಾ ಐತಿಹಾಸಿಕ ಘಟನೆಗಳ ಸಂಬಂಧ ನಾವು ಚಿತ್ರಗಳನ್ನು ಮಾಡಿದಾಗ ಇತಿಹಾಸ ಅಥವಾ ಸತ್ಯಗಳನ್ನು ಬದಲಾಯಿಸಲು ಸಾಧ್ಯವಿಲ್ಲ. ಇದನ್ನೇ ನಾವು ಚಿತ್ರದಲ್ಲಿ ಮಾಡಿದ್ದೇವೆಂದು ಹೇಳಿದ್ದಾರೆ. 
ಅಂದಿನ ಪ್ರಧಾನಮಂತ್ರಿಗಳಿಗೆ ಆಪ್ತರಾಗಿದ್ದ ವ್ಯಕ್ತಿಯೇ ಬರೆದಿದ್ದ ಪುಸ್ತಕವನ್ನು ಆಧರಿಸಿ ನಾವು ಚಿತ್ರವನ್ನು ಮಾಡಿದ್ದೇವೆ. ಈ ಪುಸ್ತಕವನ್ನು ತಿರಸ್ಕರಿಸುವಂತಿಲ್ಲ. ಚಿತ್ರ ಬಿಡುಗಡೆಯಾಗ ಬಳಿಕ ಜನರೇ ಈ ಬಗ್ಗೆ ನಿರ್ಧರಿಸುತ್ತಾರೆ. ಈಗೇಕೆ ಚಿತ್ರಕ್ಕೆ ಇಷ್ಟೊಂದು ಬಣ್ಣವನ್ನು ನೀಡುತ್ತಿದ್ದಾರೆ. 
ನಾನೊಬ್ಬ ಕೇವಲ ನಟನಷ್ಟ ಚಿತ್ರದಲ್ಲಿ ಸಮರ್ಥ ರೀತಿಯಲ್ಲಿ ಪಾತ್ರಕ್ಕೆ ಜೀವ ತುಂಬಿದ್ದೇನೆ. ಚಿತ್ರಕ್ಕಾಗಿ ನಾನು ಸಾಕಷ್ಟು ಶ್ರಮಪಟ್ಟಿದ್ದೇನೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT