ಅರವಿಂದ್ ಕೇಜ್ರಿವಾಲ್ 
ದೇಶ

ನವದೆಹಲಿ: ಎಲ್ಲರೂ ಒಟ್ಟಾಗಿ ಕೆಮ್ಮುವ ಮೂಲಕ ಕೇಜ್ರಿವಾಲ್ ಗೆ ಸಭಿಕರಿಂದ ಅವಮಾನ!

ಕಾರ್ಯಕ್ರಮವೊಂದರಲ್ಲಿ ಮಾತನಾಡಲು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಎದ್ದು ನಿಂತ ಕೂಡಲೇ ಭಾಗವಹಿಸಿದ್ದ ಬಿಜೆಪಿ ಕಾರ್ಯಕರ್ತರು ಒಟ್ಟಿಗೆ ಕೆಮ್ಮುವ ...

ನವದೆಹಲಿ: ಕಾರ್ಯಕ್ರಮವೊಂದರಲ್ಲಿ ಮಾತನಾಡಲು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಎದ್ದು ನಿಂತ ಕೂಡಲೇ ಭಾಗವಹಿಸಿದ್ದ ಬಿಜೆಪಿ ಕಾರ್ಯಕರ್ತರು ಒಟ್ಟಿಗೆ ಕೆಮ್ಮುವ ಮೂಲಕ ಅವರಿಗೆ ಅಪಮಾನ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಮಾತನಾಡಲು ಎದ್ದು ನಿಂತ ಸಿಎಂ ಸುಮ್ಮನಿರುವಂತೆ ಎಲ್ಲರಲ್ಲೂ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ, ಸಭೆಯಲ್ಲಿ ಭಾಗವಗಹಿಸಿದವರು ಅದನ್ನು ಮುಂದುವರಿಸಿದರು, ಈ ನಡುವೆ ಮಧ್ಯ ಪ್ರವೇಶಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ ಮುಖ್ಯಮಂತ್ರಿಗಳ ಭಾಷಣಕ್ಕೆ ಅವಕಾಶ ಮಾಡಿಕೊಡುವಂತೆ ಹೇಳಿದರು. 
ಇದೊಂದು ಸರ್ಕಾರಿ ಕಾರ್ಯಕ್ರಮ, ದಯಮಾಡಿ ಎಲ್ಲರೂ ನಿಶ್ಯಬ್ದವಾಗಿರಿ ಎಂದು ಮನವಿ ಮಾಡಿದರು, ಅಣಕದಿಂದ ಕೇಜ್ರಿವಾಲ್ ಅವರನ್ನು ರಕ್ಷಿಸಲು ಗಡ್ಕರಿ ಬರಬೇಕಿತ್ತು.
ನಮಾಮಿ ಗಂಗೆ ಯೋಜನೆಯಡಿ ಯಮುನಾ ನದಿ ಪುನರುಜ್ಜೀವನಕ್ಕಾಗಿ ಗುರುವಾರ 11 ಯೋಜನೆಗಳಿಗೆ ಚಾಲನೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಕೇಂದ್ರ ಸಚಿವ ನಿತಿನ್ ಗಡ್ಕರಿ ಯೋಜನೆಗೆ ಚಾಲನೆ ನೀಡಿದರು. 
ಕೆಮ್ಮಿನ ಸಮಸ್ಯೆಯಿಂದ ಬಳಲುತ್ತಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಚಿಕಿತ್ಸೆಗಾಗಿ ಹಲವು ಬಾರಿ ಬೆಂಗಳೂರಿಗೆ ಬಂದಿದ್ದುಂಟು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ಕೊನೆಗೂ ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ; ಜುಲೈ 1 ರಿಂದ ಜಾರಿ

IPL 2026: 82 ರನ್‌ಗಳಿಂದ SRH ಮಣಿಸಿದ Gujarat Titans; RCB ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಗಿಲ್ ಪಡೆ!

ಬಂಗಾಳದಲ್ಲಿ ಶುದ್ಧೀಕರಣ ಶುರು ಮಾಡಿದ ಸಿಎಂ ಸುವೇಂದು: TMC ನೇಮಕ ಮಾಡಿದ್ದ ಗ್ರೂಪ್ ಎ ಶ್ರೇಣಿಯ 232 ಅಧಿಕಾರಿಗಳ ವಜಾ!

ಒಂದೇ ಒಂದು ದಾಳಿ ನಡೆದರೂ ಯುರೇನಿಯಂ ದಾಸ್ತಾನು ಶಸ್ತ್ರಾಸ್ತ್ರ ದರ್ಜೆಗೆ ಸಂವರ್ಧನೆ- ಅಮೆರಿಕಾಗೆ ಇರಾನ್ ಕಠಿಣ ಎಚ್ಚರಿಕೆ!

Gruha Lakshmi | ದಕ್ಷಿಣ ಕನ್ನಡದಲ್ಲಿ ಮೃತ ಫಲಾನುಭವಿಗಳ ಖಾತೆಗೆ 22 ಕೋಟಿ ರೂ ಗೃಹಲಕ್ಷ್ಮಿ ಹಣ ಜಮೆ!

SCROLL FOR NEXT