ನವದೆಹಲಿ: ಕಾರ್ಯಕ್ರಮವೊಂದರಲ್ಲಿ ಮಾತನಾಡಲು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಎದ್ದು ನಿಂತ ಕೂಡಲೇ ಭಾಗವಹಿಸಿದ್ದ ಬಿಜೆಪಿ ಕಾರ್ಯಕರ್ತರು ಒಟ್ಟಿಗೆ ಕೆಮ್ಮುವ ಮೂಲಕ ಅವರಿಗೆ ಅಪಮಾನ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಮಾತನಾಡಲು ಎದ್ದು ನಿಂತ ಸಿಎಂ ಸುಮ್ಮನಿರುವಂತೆ ಎಲ್ಲರಲ್ಲೂ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ, ಸಭೆಯಲ್ಲಿ ಭಾಗವಗಹಿಸಿದವರು ಅದನ್ನು ಮುಂದುವರಿಸಿದರು, ಈ ನಡುವೆ ಮಧ್ಯ ಪ್ರವೇಶಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ ಮುಖ್ಯಮಂತ್ರಿಗಳ ಭಾಷಣಕ್ಕೆ ಅವಕಾಶ ಮಾಡಿಕೊಡುವಂತೆ ಹೇಳಿದರು.
ಇದೊಂದು ಸರ್ಕಾರಿ ಕಾರ್ಯಕ್ರಮ, ದಯಮಾಡಿ ಎಲ್ಲರೂ ನಿಶ್ಯಬ್ದವಾಗಿರಿ ಎಂದು ಮನವಿ ಮಾಡಿದರು, ಅಣಕದಿಂದ ಕೇಜ್ರಿವಾಲ್ ಅವರನ್ನು ರಕ್ಷಿಸಲು ಗಡ್ಕರಿ ಬರಬೇಕಿತ್ತು.
ನಮಾಮಿ ಗಂಗೆ ಯೋಜನೆಯಡಿ ಯಮುನಾ ನದಿ ಪುನರುಜ್ಜೀವನಕ್ಕಾಗಿ ಗುರುವಾರ 11 ಯೋಜನೆಗಳಿಗೆ ಚಾಲನೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಕೇಂದ್ರ ಸಚಿವ ನಿತಿನ್ ಗಡ್ಕರಿ ಯೋಜನೆಗೆ ಚಾಲನೆ ನೀಡಿದರು.
ಕೆಮ್ಮಿನ ಸಮಸ್ಯೆಯಿಂದ ಬಳಲುತ್ತಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಚಿಕಿತ್ಸೆಗಾಗಿ ಹಲವು ಬಾರಿ ಬೆಂಗಳೂರಿಗೆ ಬಂದಿದ್ದುಂಟು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos