ಅರವಿಂದ್ ಕೇಜ್ರಿವಾಲ್ 
ದೇಶ

ನವದೆಹಲಿ: ಎಲ್ಲರೂ ಒಟ್ಟಾಗಿ ಕೆಮ್ಮುವ ಮೂಲಕ ಕೇಜ್ರಿವಾಲ್ ಗೆ ಸಭಿಕರಿಂದ ಅವಮಾನ!

ಕಾರ್ಯಕ್ರಮವೊಂದರಲ್ಲಿ ಮಾತನಾಡಲು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಎದ್ದು ನಿಂತ ಕೂಡಲೇ ಭಾಗವಹಿಸಿದ್ದ ಬಿಜೆಪಿ ಕಾರ್ಯಕರ್ತರು ಒಟ್ಟಿಗೆ ಕೆಮ್ಮುವ ...

ನವದೆಹಲಿ: ಕಾರ್ಯಕ್ರಮವೊಂದರಲ್ಲಿ ಮಾತನಾಡಲು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಎದ್ದು ನಿಂತ ಕೂಡಲೇ ಭಾಗವಹಿಸಿದ್ದ ಬಿಜೆಪಿ ಕಾರ್ಯಕರ್ತರು ಒಟ್ಟಿಗೆ ಕೆಮ್ಮುವ ಮೂಲಕ ಅವರಿಗೆ ಅಪಮಾನ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಮಾತನಾಡಲು ಎದ್ದು ನಿಂತ ಸಿಎಂ ಸುಮ್ಮನಿರುವಂತೆ ಎಲ್ಲರಲ್ಲೂ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ, ಸಭೆಯಲ್ಲಿ ಭಾಗವಗಹಿಸಿದವರು ಅದನ್ನು ಮುಂದುವರಿಸಿದರು, ಈ ನಡುವೆ ಮಧ್ಯ ಪ್ರವೇಶಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ ಮುಖ್ಯಮಂತ್ರಿಗಳ ಭಾಷಣಕ್ಕೆ ಅವಕಾಶ ಮಾಡಿಕೊಡುವಂತೆ ಹೇಳಿದರು. 
ಇದೊಂದು ಸರ್ಕಾರಿ ಕಾರ್ಯಕ್ರಮ, ದಯಮಾಡಿ ಎಲ್ಲರೂ ನಿಶ್ಯಬ್ದವಾಗಿರಿ ಎಂದು ಮನವಿ ಮಾಡಿದರು, ಅಣಕದಿಂದ ಕೇಜ್ರಿವಾಲ್ ಅವರನ್ನು ರಕ್ಷಿಸಲು ಗಡ್ಕರಿ ಬರಬೇಕಿತ್ತು.
ನಮಾಮಿ ಗಂಗೆ ಯೋಜನೆಯಡಿ ಯಮುನಾ ನದಿ ಪುನರುಜ್ಜೀವನಕ್ಕಾಗಿ ಗುರುವಾರ 11 ಯೋಜನೆಗಳಿಗೆ ಚಾಲನೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಕೇಂದ್ರ ಸಚಿವ ನಿತಿನ್ ಗಡ್ಕರಿ ಯೋಜನೆಗೆ ಚಾಲನೆ ನೀಡಿದರು. 
ಕೆಮ್ಮಿನ ಸಮಸ್ಯೆಯಿಂದ ಬಳಲುತ್ತಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಚಿಕಿತ್ಸೆಗಾಗಿ ಹಲವು ಬಾರಿ ಬೆಂಗಳೂರಿಗೆ ಬಂದಿದ್ದುಂಟು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್