ಜೆ.ರಾಧಾಕೃಷ್ಣನ್ 
ದೇಶ

ಜಯಾ ವಿರುದ್ಧ ತಮಿಳುನಾಡು ಆರೋಗ್ಯ ಕಾರ್ಯದರ್ಶಿ ಸಂಚು: ತನಿಖಾ ಆಯೋಗ ಆರೋಪ

ತಮಿಳುನಾಡು ಆರೋಗ್ಯ ಇಲಾಖೆ ಕಾರ್ಯದರ್ಶಿ ಜೆ.ರಾಧಾಕೃಷ್ಣನ್ ಅವರು ಅಪೊಲೊ ಆಸ್ಪತ್ರೆ ಜತೆ ಸೇರಿ...

ಚೆನ್ನೈ: ತಮಿಳುನಾಡು ಆರೋಗ್ಯ ಇಲಾಖೆ ಕಾರ್ಯದರ್ಶಿ ಜೆ.ರಾಧಾಕೃಷ್ಣನ್ ಅವರು ಅಪೊಲೊ ಆಸ್ಪತ್ರೆ ಜತೆ ಸೇರಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಸಾವಿಗೆ ಸಂಚು ರೂಪಿಸಿದ್ದರು ಎಂದು ತನಿಖಾ ಆಯೋಗದ ಪರ ವಕೀಲರು ಆರೋಪಿಸಿದ್ದಾರೆ.
ರಾಧಾಕೃಷ್ಣನ್ ಅವರು ಅಪೊಲೊ ಆಸ್ಪತ್ರೆ ಜತೆ ಸೇರಿಕೊಂಡು ಜಯಲಲಿತಾ ಅವರಿಗೆ ಅಸಮರ್ಪಕ ಚಿಕಿತ್ಸೆ ಕೊಡಿಸಿದ್ದಾರೆ ಎಂದು ಆಯೋಗದ ಪರ ವಕೀಲ ಮೊಹಮ್ಮದ್ ಜಫರುಲ್ಲಾ ಖಾನ್ ಅವರು ದೂರಿದ್ದಾರೆ.
2016ರಲ್ಲಿ ಜಯಲಲಿತಾ ಅವರು ಆಸ್ಪತ್ರೆಗೆ ದಾಖಲಾಗಿದ್ದಾಗ ಅಂದಿನ ಮುಖ್ಯ ಕಾರ್ಯದರ್ಶಿ ಪಿ ರಾಮ್ ಮೋಹನ್ ಅವರು ಉದ್ದೇಶಪೂರ್ವಕವಾಗಿ ಸುಳ್ಳು ದಾಖಲೆಗಳನ್ನು ನೀಡಿದ್ದಾರೆ ಎಂದು ಖಾನ್ ಆರೋಪಿಸಿದ್ದಾರೆ.
ಈ ಸಂಬಂಧ ಆಯೋಗಕ್ಕೆ ದೂರು ನೀಡಿರುವ ಖಾನ್ ಅವರು, ಈ ಇಬ್ಬರನ್ನು ತನಿಖೆಗೆ ಒಳಪಡಿಸಬೇಕು ಎಂದು ನ್ಯಾಯಮೂರ್ತಿ ಎ.ಆರ್ಮುಗಸ್ವಾಮಿ ನೇತೃತ್ವದ ತನಿಖಾ ಆಯೋಗಕ್ಕೆ ಮನವಿ ಮಾಡಿದ್ದಾರೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಅಪೊಲೊ ಆಸ್ಪತ್ರೆ, ವಕೀಲರು ಮಾಡಿರುವ ಆರೋಪಗಳು ಆಧಾರ ರಹಿತ ಮತ್ತು ಸುಳ್ಳು ಸುದ್ದಿಗಳು ಎಂದು ಹೇಳಿದೆ. ಅಲ್ಲದೆ ರಾಧಾಕೃಷ್ಣನ್ ಅವರು ಸಹ ತಮ್ಮ ವಿರುದ್ಧದ ಆರೋಪಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT