ಜೆ.ರಾಧಾಕೃಷ್ಣನ್ 
ದೇಶ

ಜಯಾ ವಿರುದ್ಧ ತಮಿಳುನಾಡು ಆರೋಗ್ಯ ಕಾರ್ಯದರ್ಶಿ ಸಂಚು: ತನಿಖಾ ಆಯೋಗ ಆರೋಪ

ತಮಿಳುನಾಡು ಆರೋಗ್ಯ ಇಲಾಖೆ ಕಾರ್ಯದರ್ಶಿ ಜೆ.ರಾಧಾಕೃಷ್ಣನ್ ಅವರು ಅಪೊಲೊ ಆಸ್ಪತ್ರೆ ಜತೆ ಸೇರಿ...

ಚೆನ್ನೈ: ತಮಿಳುನಾಡು ಆರೋಗ್ಯ ಇಲಾಖೆ ಕಾರ್ಯದರ್ಶಿ ಜೆ.ರಾಧಾಕೃಷ್ಣನ್ ಅವರು ಅಪೊಲೊ ಆಸ್ಪತ್ರೆ ಜತೆ ಸೇರಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಸಾವಿಗೆ ಸಂಚು ರೂಪಿಸಿದ್ದರು ಎಂದು ತನಿಖಾ ಆಯೋಗದ ಪರ ವಕೀಲರು ಆರೋಪಿಸಿದ್ದಾರೆ.
ರಾಧಾಕೃಷ್ಣನ್ ಅವರು ಅಪೊಲೊ ಆಸ್ಪತ್ರೆ ಜತೆ ಸೇರಿಕೊಂಡು ಜಯಲಲಿತಾ ಅವರಿಗೆ ಅಸಮರ್ಪಕ ಚಿಕಿತ್ಸೆ ಕೊಡಿಸಿದ್ದಾರೆ ಎಂದು ಆಯೋಗದ ಪರ ವಕೀಲ ಮೊಹಮ್ಮದ್ ಜಫರುಲ್ಲಾ ಖಾನ್ ಅವರು ದೂರಿದ್ದಾರೆ.
2016ರಲ್ಲಿ ಜಯಲಲಿತಾ ಅವರು ಆಸ್ಪತ್ರೆಗೆ ದಾಖಲಾಗಿದ್ದಾಗ ಅಂದಿನ ಮುಖ್ಯ ಕಾರ್ಯದರ್ಶಿ ಪಿ ರಾಮ್ ಮೋಹನ್ ಅವರು ಉದ್ದೇಶಪೂರ್ವಕವಾಗಿ ಸುಳ್ಳು ದಾಖಲೆಗಳನ್ನು ನೀಡಿದ್ದಾರೆ ಎಂದು ಖಾನ್ ಆರೋಪಿಸಿದ್ದಾರೆ.
ಈ ಸಂಬಂಧ ಆಯೋಗಕ್ಕೆ ದೂರು ನೀಡಿರುವ ಖಾನ್ ಅವರು, ಈ ಇಬ್ಬರನ್ನು ತನಿಖೆಗೆ ಒಳಪಡಿಸಬೇಕು ಎಂದು ನ್ಯಾಯಮೂರ್ತಿ ಎ.ಆರ್ಮುಗಸ್ವಾಮಿ ನೇತೃತ್ವದ ತನಿಖಾ ಆಯೋಗಕ್ಕೆ ಮನವಿ ಮಾಡಿದ್ದಾರೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಅಪೊಲೊ ಆಸ್ಪತ್ರೆ, ವಕೀಲರು ಮಾಡಿರುವ ಆರೋಪಗಳು ಆಧಾರ ರಹಿತ ಮತ್ತು ಸುಳ್ಳು ಸುದ್ದಿಗಳು ಎಂದು ಹೇಳಿದೆ. ಅಲ್ಲದೆ ರಾಧಾಕೃಷ್ಣನ್ ಅವರು ಸಹ ತಮ್ಮ ವಿರುದ್ಧದ ಆರೋಪಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್