ಜೆ.ರಾಧಾಕೃಷ್ಣನ್ 
ದೇಶ

ಜಯಾ ವಿರುದ್ಧ ತಮಿಳುನಾಡು ಆರೋಗ್ಯ ಕಾರ್ಯದರ್ಶಿ ಸಂಚು: ತನಿಖಾ ಆಯೋಗ ಆರೋಪ

ತಮಿಳುನಾಡು ಆರೋಗ್ಯ ಇಲಾಖೆ ಕಾರ್ಯದರ್ಶಿ ಜೆ.ರಾಧಾಕೃಷ್ಣನ್ ಅವರು ಅಪೊಲೊ ಆಸ್ಪತ್ರೆ ಜತೆ ಸೇರಿ...

ಚೆನ್ನೈ: ತಮಿಳುನಾಡು ಆರೋಗ್ಯ ಇಲಾಖೆ ಕಾರ್ಯದರ್ಶಿ ಜೆ.ರಾಧಾಕೃಷ್ಣನ್ ಅವರು ಅಪೊಲೊ ಆಸ್ಪತ್ರೆ ಜತೆ ಸೇರಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಸಾವಿಗೆ ಸಂಚು ರೂಪಿಸಿದ್ದರು ಎಂದು ತನಿಖಾ ಆಯೋಗದ ಪರ ವಕೀಲರು ಆರೋಪಿಸಿದ್ದಾರೆ.
ರಾಧಾಕೃಷ್ಣನ್ ಅವರು ಅಪೊಲೊ ಆಸ್ಪತ್ರೆ ಜತೆ ಸೇರಿಕೊಂಡು ಜಯಲಲಿತಾ ಅವರಿಗೆ ಅಸಮರ್ಪಕ ಚಿಕಿತ್ಸೆ ಕೊಡಿಸಿದ್ದಾರೆ ಎಂದು ಆಯೋಗದ ಪರ ವಕೀಲ ಮೊಹಮ್ಮದ್ ಜಫರುಲ್ಲಾ ಖಾನ್ ಅವರು ದೂರಿದ್ದಾರೆ.
2016ರಲ್ಲಿ ಜಯಲಲಿತಾ ಅವರು ಆಸ್ಪತ್ರೆಗೆ ದಾಖಲಾಗಿದ್ದಾಗ ಅಂದಿನ ಮುಖ್ಯ ಕಾರ್ಯದರ್ಶಿ ಪಿ ರಾಮ್ ಮೋಹನ್ ಅವರು ಉದ್ದೇಶಪೂರ್ವಕವಾಗಿ ಸುಳ್ಳು ದಾಖಲೆಗಳನ್ನು ನೀಡಿದ್ದಾರೆ ಎಂದು ಖಾನ್ ಆರೋಪಿಸಿದ್ದಾರೆ.
ಈ ಸಂಬಂಧ ಆಯೋಗಕ್ಕೆ ದೂರು ನೀಡಿರುವ ಖಾನ್ ಅವರು, ಈ ಇಬ್ಬರನ್ನು ತನಿಖೆಗೆ ಒಳಪಡಿಸಬೇಕು ಎಂದು ನ್ಯಾಯಮೂರ್ತಿ ಎ.ಆರ್ಮುಗಸ್ವಾಮಿ ನೇತೃತ್ವದ ತನಿಖಾ ಆಯೋಗಕ್ಕೆ ಮನವಿ ಮಾಡಿದ್ದಾರೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಅಪೊಲೊ ಆಸ್ಪತ್ರೆ, ವಕೀಲರು ಮಾಡಿರುವ ಆರೋಪಗಳು ಆಧಾರ ರಹಿತ ಮತ್ತು ಸುಳ್ಳು ಸುದ್ದಿಗಳು ಎಂದು ಹೇಳಿದೆ. ಅಲ್ಲದೆ ರಾಧಾಕೃಷ್ಣನ್ ಅವರು ಸಹ ತಮ್ಮ ವಿರುದ್ಧದ ಆರೋಪಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಾರತಕ್ಕೆ ಸೇವೆ ನೀಡಲು ಸ್ಟಾರ್‌ಲಿಂಕ್ ಸಿದ್ಧ, ಗ್ರಾಮೀಣ ಸಂಪರ್ಕಕ್ಕೆ ಸಹಾಯ ಮಾಡುತ್ತದೆ': Elon Musk

ತಮಿಳುನಾಡು: ಸರ್ಕಾರಿ ಬಸ್‌ಗಳ ಮುಖಾಮುಖಿ ಡಿಕ್ಕಿ; ಕನಿಷ್ಠ 11 ಮಂದಿ ಸಾವು, 20 ಜನರಿಗೆ ಗಾಯ!

ಮೊದಲ ಏಕದಿನ ಪಂದ್ಯ: ದಕ್ಷಿಣ ಆಫ್ರಿಕಾ ಅಬ್ಬರದ ಬ್ಯಾಟಿಂಗ್: ಕೊನೆಯ ಓವರ್ ನಲ್ಲಿ ಭಾರತಕ್ಕೆ ವಿರೋಚಿತ ಜಯ!

'ಆ ಹಸಿವು ಇನ್ನೂ ಇದೆ.. ನಾನು ಉತ್ತಮ ಸ್ಥಿತಿಯಲ್ಲಿದ್ದೇನೆ': Virat kohli ಖಡಕ್ ಸಂದೇಶ! ಟೆಸ್ಟ್ ಕ್ರಿಕೆಟ್ ಗೆ ಕೊಹ್ಲಿ ವಾಪಸ್?

Cricket: ಕೇವಲ 11 ರನ್ ಗೆ 3 ವಿಕೆಟ್; ಗೆಲುವಿನ ಸನಿಹ ಬಂದಿದ್ದ ದಕ್ಷಿಣ ಆಫ್ರಿಕಾ ಸೋಲಿನಲ್ಲೂ ದಾಖಲೆಗಳ ಸುರಿಮಳೆ!

SCROLL FOR NEXT