ಭಯೋತ್ಪಾದಕರ ಕುಟುಂಬವನ್ನು ಭೇಟಿ ಮಾಡಿದ ಮೆಹಬೂಬಾ ಮುಫ್ತಿ, ರಾಜ್ಯಪಾಲರು, ಪೊಲೀಸರಿಗೇ ಎಚ್ಚರಿಕೆ!
ಜಮ್ಮು: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ಕುಟುಂಬ ಸದಸ್ಯರನ್ನು ಮಾಜಿ ಸಿಎಂ ಮೆಹಬೂಬಾ ಮುಫ್ತಿ ಭೇಟಿ ಮಾಡಿದ್ದಾರೆ.
ಪುಲ್ವಾಮ ಜಿಲ್ಲೆಯಲ್ಲಿ ಭಯೋತ್ಪಾದಕನ ಸಹೋದರಿ ಹಾಗೂ ಆಕೆಯ ಪತಿಯನ್ನು ಪೊಲೀಸರು ಥಳಿಸಿದ್ದರು ಎಂಬ ಆರೋಪ ಕೇಳಿಬಂದಿದ್ದು, ಈ ಬೆನ್ನಲ್ಲೇ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಭೇಟಿ ಮಾಡಿದ್ದಾರೆ.
ಉಗ್ರನ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ಬಳಿಕ ಮಾತನಾಡಿರುವ ಮೆಹಬೂಬಾ ಮುಫ್ತಿ, ಪೊಲೀಸರು ಭಯೋತ್ಪಾದಕನ ಸಹೋದರಿಯನ್ನು ಥಳಿಸಿರುವುದು ದುರದೃಷ್ಟಕರ ಎಂದು ಹೇಳಿದ್ದಾರೆ. ಇದೇ ವೇಳೆ ರಾಜ್ಯಪಾಲರು ಹಾಗೂ ಜಮ್ಮು-ಕಾಶ್ಮೀರದ ಪೊಲೀಸರಿಗೆ ಮೆಹಬೂಬಾ ಮುಫ್ತಿ ಎಚ್ಚರಿಕೆ ನೀಡಿದ್ದು, ಈ ರೀತಿಯ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕೆಂದು ಹೇಳಿದ್ದಾರೆ.
ಜಮ್ಮು-ಕಾಶ್ಮೀರದ ರಾಜ್ಯಪಾಲರು ಭಯೋತ್ಪಾದಕರ ವಿರುದ್ಧ ಹೋರಾಡುತ್ತಿದ್ದರೆ ಭಯೋತ್ಪಾದಕರ ಕುಟುಂಬ ಸದಸ್ಯರನ್ನು ಏಕೆ ಅದರಲ್ಲಿ ಎಳೆದುತರಬೇಕು ರಾಜ್ಯಪಾಲರು ಹಾಗೂ ಪೊಲೀಸರು ಈ ರೀತಿಯ ಕ್ರಮವನ್ನು ಮುಂದುವರೆಸಿದರೆ ಅದು ಅವರಿಗೆ ಕೆಟ್ಟ ಪರಿಣಾಮಗಳನ್ನು ಬೀರಲಿದೆ ಎಂದು ಮುಫ್ತಿ ಎಚ್ಚರಿಕೆ ನೀಡಿದ್ದಾರೆ.