ಭಯೋತ್ಪಾದಕರ ಕುಟುಂಬವನ್ನು ಭೇಟಿ ಮಾಡಿದ ಮೆಹಬೂಬಾ ಮುಫ್ತಿ, ರಾಜ್ಯಪಾಲರು, ಪೊಲೀಸರಿಗೇ ಎಚ್ಚರಿಕೆ! 
ದೇಶ

ಉಗ್ರನ ಕುಟುಂಬವನ್ನು ಭೇಟಿ ಮಾಡಿದ ಮೆಹಬೂಬಾ ಮುಫ್ತಿ, ರಾಜ್ಯಪಾಲರು, ಪೊಲೀಸರಿಗೇ ಎಚ್ಚರಿಕೆ!

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ಕುಟುಂಬ ಸದಸ್ಯರನ್ನು ಮಾಜಿ ಸಿಎಂ ಮೆಹಬೂಬಾ ಮುಫ್ತಿ ಭೇಟಿ ಮಾಡಿದ್ದಾರೆ.

ಜಮ್ಮು: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ಕುಟುಂಬ ಸದಸ್ಯರನ್ನು ಮಾಜಿ ಸಿಎಂ ಮೆಹಬೂಬಾ ಮುಫ್ತಿ ಭೇಟಿ ಮಾಡಿದ್ದಾರೆ. 
ಪುಲ್ವಾಮ ಜಿಲ್ಲೆಯಲ್ಲಿ ಭಯೋತ್ಪಾದಕನ ಸಹೋದರಿ ಹಾಗೂ ಆಕೆಯ ಪತಿಯನ್ನು ಪೊಲೀಸರು ಥಳಿಸಿದ್ದರು ಎಂಬ ಆರೋಪ ಕೇಳಿಬಂದಿದ್ದು, ಈ ಬೆನ್ನಲ್ಲೇ  ಮಾಜಿ ಸಿಎಂ ಮೆಹಬೂಬಾ ಮುಫ್ತಿ ಭೇಟಿ ಮಾಡಿದ್ದಾರೆ. 
ಉಗ್ರನ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ಬಳಿಕ ಮಾತನಾಡಿರುವ ಮೆಹಬೂಬಾ ಮುಫ್ತಿ, ಪೊಲೀಸರು ಭಯೋತ್ಪಾದಕನ ಸಹೋದರಿಯನ್ನು ಥಳಿಸಿರುವುದು ದುರದೃಷ್ಟಕರ ಎಂದು ಹೇಳಿದ್ದಾರೆ. ಇದೇ ವೇಳೆ ರಾಜ್ಯಪಾಲರು ಹಾಗೂ ಜಮ್ಮು-ಕಾಶ್ಮೀರದ ಪೊಲೀಸರಿಗೆ ಮೆಹಬೂಬಾ ಮುಫ್ತಿ ಎಚ್ಚರಿಕೆ ನೀಡಿದ್ದು, ಈ ರೀತಿಯ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕೆಂದು ಹೇಳಿದ್ದಾರೆ. 
ಜಮ್ಮು-ಕಾಶ್ಮೀರದ ರಾಜ್ಯಪಾಲರು ಭಯೋತ್ಪಾದಕರ ವಿರುದ್ಧ ಹೋರಾಡುತ್ತಿದ್ದರೆ ಭಯೋತ್ಪಾದಕರ ಕುಟುಂಬ ಸದಸ್ಯರನ್ನು ಏಕೆ ಅದರಲ್ಲಿ ಎಳೆದುತರಬೇಕು ರಾಜ್ಯಪಾಲರು ಹಾಗೂ ಪೊಲೀಸರು ಈ ರೀತಿಯ ಕ್ರಮವನ್ನು ಮುಂದುವರೆಸಿದರೆ ಅದು ಅವರಿಗೆ ಕೆಟ್ಟ ಪರಿಣಾಮಗಳನ್ನು ಬೀರಲಿದೆ ಎಂದು ಮುಫ್ತಿ ಎಚ್ಚರಿಕೆ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT