ಭಯೋತ್ಪಾದಕರ ಕುಟುಂಬವನ್ನು ಭೇಟಿ ಮಾಡಿದ ಮೆಹಬೂಬಾ ಮುಫ್ತಿ, ರಾಜ್ಯಪಾಲರು, ಪೊಲೀಸರಿಗೇ ಎಚ್ಚರಿಕೆ! 
ದೇಶ

ಉಗ್ರನ ಕುಟುಂಬವನ್ನು ಭೇಟಿ ಮಾಡಿದ ಮೆಹಬೂಬಾ ಮುಫ್ತಿ, ರಾಜ್ಯಪಾಲರು, ಪೊಲೀಸರಿಗೇ ಎಚ್ಚರಿಕೆ!

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ಕುಟುಂಬ ಸದಸ್ಯರನ್ನು ಮಾಜಿ ಸಿಎಂ ಮೆಹಬೂಬಾ ಮುಫ್ತಿ ಭೇಟಿ ಮಾಡಿದ್ದಾರೆ.

ಜಮ್ಮು: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ಕುಟುಂಬ ಸದಸ್ಯರನ್ನು ಮಾಜಿ ಸಿಎಂ ಮೆಹಬೂಬಾ ಮುಫ್ತಿ ಭೇಟಿ ಮಾಡಿದ್ದಾರೆ. 
ಪುಲ್ವಾಮ ಜಿಲ್ಲೆಯಲ್ಲಿ ಭಯೋತ್ಪಾದಕನ ಸಹೋದರಿ ಹಾಗೂ ಆಕೆಯ ಪತಿಯನ್ನು ಪೊಲೀಸರು ಥಳಿಸಿದ್ದರು ಎಂಬ ಆರೋಪ ಕೇಳಿಬಂದಿದ್ದು, ಈ ಬೆನ್ನಲ್ಲೇ  ಮಾಜಿ ಸಿಎಂ ಮೆಹಬೂಬಾ ಮುಫ್ತಿ ಭೇಟಿ ಮಾಡಿದ್ದಾರೆ. 
ಉಗ್ರನ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ಬಳಿಕ ಮಾತನಾಡಿರುವ ಮೆಹಬೂಬಾ ಮುಫ್ತಿ, ಪೊಲೀಸರು ಭಯೋತ್ಪಾದಕನ ಸಹೋದರಿಯನ್ನು ಥಳಿಸಿರುವುದು ದುರದೃಷ್ಟಕರ ಎಂದು ಹೇಳಿದ್ದಾರೆ. ಇದೇ ವೇಳೆ ರಾಜ್ಯಪಾಲರು ಹಾಗೂ ಜಮ್ಮು-ಕಾಶ್ಮೀರದ ಪೊಲೀಸರಿಗೆ ಮೆಹಬೂಬಾ ಮುಫ್ತಿ ಎಚ್ಚರಿಕೆ ನೀಡಿದ್ದು, ಈ ರೀತಿಯ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕೆಂದು ಹೇಳಿದ್ದಾರೆ. 
ಜಮ್ಮು-ಕಾಶ್ಮೀರದ ರಾಜ್ಯಪಾಲರು ಭಯೋತ್ಪಾದಕರ ವಿರುದ್ಧ ಹೋರಾಡುತ್ತಿದ್ದರೆ ಭಯೋತ್ಪಾದಕರ ಕುಟುಂಬ ಸದಸ್ಯರನ್ನು ಏಕೆ ಅದರಲ್ಲಿ ಎಳೆದುತರಬೇಕು ರಾಜ್ಯಪಾಲರು ಹಾಗೂ ಪೊಲೀಸರು ಈ ರೀತಿಯ ಕ್ರಮವನ್ನು ಮುಂದುವರೆಸಿದರೆ ಅದು ಅವರಿಗೆ ಕೆಟ್ಟ ಪರಿಣಾಮಗಳನ್ನು ಬೀರಲಿದೆ ಎಂದು ಮುಫ್ತಿ ಎಚ್ಚರಿಕೆ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT