ಶೇಖ್ ಹಸೀನಾ ಹಾಗೂ ಪ್ರಧಾನಿ ಮೋದಿ (ಸಂಗ್ರಹ ಚಿತ್ರ) 
ದೇಶ

ಬಾಂಗ್ಲಾದೇಶ ಚುನಾವಣೆಯಲ್ಲಿ ಶೇಖ್ ಹಸೀನಾಗೆ ಗೆಲವು: ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

ಬಾಂಗ್ಲಾದೇಶ ಪ್ರಧಾನಮಂತ್ರಿ ಶೇಖ್ ಹಸೀನಾ ನೇತೃತ್ವದ ಮಿತ್ರಪಕ್ಷಗಳ ಒಕ್ಕೂಟ ಚುನಾವಣೆಯಲ್ಲಿ ಭರ್ಜರಿ ಗೆಲವು ಸಾಧಿಸಿದ್ದು, ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿದೆ. ಸತತ 4ನೇ ಬಾರಿಗೆ ಪ್ರಧಾನಮಂತ್ರಿಯಾಗಿ ಶೇಖ್ ಹಸೀನಾ...

ಡಾಕಾ: ಬಾಂಗ್ಲಾದೇಶ ಪ್ರಧಾನಮಂತ್ರಿ ಶೇಖ್ ಹಸೀನಾ ನೇತೃತ್ವದ ಮಿತ್ರಪಕ್ಷಗಳ ಒಕ್ಕೂಟ ಚುನಾವಣೆಯಲ್ಲಿ ಭರ್ಜರಿ ಗೆಲವು ಸಾಧಿಸಿದ್ದು, ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿದೆ. ಸತತ 4ನೇ ಬಾರಿಗೆ ಪ್ರಧಾನಮಂತ್ರಿಯಾಗಿ ಶೇಖ್ ಹಸೀನಾ ಅವರು ಆಯ್ಕೆಯಾಗಿರುವ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. 
ಶೇಖ್ ಹಸೀನಾ ಅವರೊಂದಿಗೆ ಮಾತನಾಡಿರುವ ಕುರಿತು ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ. 
ಬಾಂಗ್ಲಾದೇಶ ಚುನಾವಣೆಯಲ್ಲಿ ಮತ್ತೊಮ್ಮೆ ಗೆಲವು ದಾಖಲಿಸಿರುವ ಶೇಖ್ ಹಸೀನಾ ಅವರೊಂದಿಗೆ ದೂರವಾಣಿ ಕರೆ ಮೂಲಕ ಮಾತುಕತೆ ನಡೆಸಿದ್ದೇನೆ. ಈ ವೇಳೆ ಶುಭಾಶಯಗಳನ್ನು ಕೋರಿದ್ದೇನೆಂದು ಹೇಳಿದ್ದಾರೆ. 
ಜೊತೆಗೆ ಭಾರತದೊಂದಿದೆ ನಿಮ್ಮ ಉತ್ತಮ ಬಾಂಧವ್ಯ ಹೀಗೆಯೇ ಮುಂದುವರೆಯಲಿ ಎಂದು ತಿಳಿಸಿದ್ದಾರೆಂದು ತಿಳಿದುಬಂದಿದೆ. 
ಪ್ರತಿಪಕ್ಷಗಳನ್ನು ಮಣಿಸಿ ಸತತ ನಾಲ್ಕನೇ ಬಾರಿ ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್ ಬಾಂಗ್ಲಾದೇಶದ ಅಧಿಕಾರದ ಗದ್ದುಗೆಗೆ ಏರಿದೆ. 300 ಸದಸ್ಯ ಬಲದ ಸಂಸತ್ ನಲ್ಲಿ ಅವಾಮಿ ಲೀಗ್ ಹಾಗೂ ಅದರ ಮಿತ್ರ ಪಕ್ಷಗಳು ಬರೋಬ್ಬರಿ 267 ಕ್ಷೇತ್ರಗಳಲ್ಲಿ ಗೆಲವು ಸಾಧಿಸಿ ದಿಗ್ವಿಜಯ ಸಾಧಿಸಿದೆ. ಪ್ರಮುಖ ಪ್ರತಿಪಕ್ಷವಾಗಿದ್ದ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಕ್ಷ (ಬಿಎನ್'ಪಿ) ಕೇವಲ 21 ಸೀಟುಗಳನ್ನು ಮಾತ್ರ ಗೆಲ್ಲಲು ಸಾಧ್ಯವಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?