ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರ (ಸಾಂದರ್ಭಿಕ ಚಿತ್ರ) 
ದೇಶ

ತಮಿಳುನಾಡು ರಕ್ಷಣಾ ಕಾರಿಡಾರ್ ನಿಂದ ಚೆನ್ನೈ, ಬೆಂಗಳೂರು ಸಂಪರ್ಕ: ನಿರ್ಮಲಾ ಸೀತಾರಾಮನ್

2018-19ರ ಕೇಂದ್ರ ಬಜೆಟ್ ನಲ್ಲಿ ಪ್ರಸ್ತಾಪಿಸಿರುವ ತಮಿಳುನಾಡು ರಕ್ಷಣಾ ಕಾರಿಡಾರ್ ಚೆನ್ನೈ ಮತ್ತು ಬೆಂಗಳೂರನ್ನು ಸಂಪರ್ಕಿಸಲಿದೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ನವದೆಹಲಿ: 2018-19ರ ಕೇಂದ್ರ ಬಜೆಟ್ ನಲ್ಲಿ ಪ್ರಸ್ತಾಪಿಸಿರುವ ತಮಿಳುನಾಡು ರಕ್ಷಣಾ ಕಾರಿಡಾರ್  ಚೆನ್ನೈ ಮತ್ತು ಬೆಂಗಳೂರನ್ನು ಸಂಪರ್ಕಿಸಲಿದೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್  ಹೇಳಿದ್ದಾರೆ.

ತಮಿಳುನಾಡಿನಲ್ಲಿ ಮೊದಲಿಗೆ  ಆರಂಭಗೊಳ್ಳುವ ಕಾರಿಡಾರ್ , ಚೆನ್ನೈ ಮತ್ತು ಬೆಂಗಳೂರನ್ನು ಸಂಪರ್ಕಿಸಲಿದ್ದು, ಎರಡನೇ ಕಾರಿಡಾರನ್ನು ಶೀಘ್ರದಲ್ಲಿಯೇ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ.

 ಹಣಕಾಸು ಸಚಿವ ಅರುಣ್ ಜೇಟ್ಲಿ ನಿನ್ನೆ ಮಂಡಿಸಿದ್ದ ಬಜೆಟ್ ನಲ್ಲಿ  ಎರಡು ರಕ್ಷಣಾ ಕಾರಿಡಾರ್ ಸ್ಥಾಪನೆ ಮಾಡುವುದಾಗಿ ಹೇಳಿದ್ದರು. ಖಾಸಗಿ ಹಾಗೂ ಸರ್ಕಾರಿ ಸಹಭಾಗಿತ್ವದಲ್ಲಿ ರಕ್ಷಣಾ ಉತ್ಪನ್ನ ಉತ್ಪಾದನೆಯನ್ನು ಸರ್ಕಾರ ಪ್ರೋತ್ಸಾಹಿಸುತ್ತಿದ್ದು, ದೇಶದಲ್ಲಿ ರಕ್ಷಣಾ ಉತ್ಪನ್ನ ಉತ್ಪಾದಿಸುವ ಉದ್ಯಮಗಳ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದರು.

ಈ ಪ್ರಸ್ತಾವಕ್ಕೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅರುಣ್ ಜೇಟ್ಲಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.ಕಳೆದ ಬಾರಿಗೆ ಹೋಲಿಸಿದ್ದರೆ ಈ ಬಾರಿ ರಕ್ಷಣಾ ಕ್ಷೇತ್ರಕ್ಕೆ ಮೀಸಲಿಟ್ಟಿರುವ ಹಣದಲ್ಲಿ ಶೇ.7.9 ರಷ್ಟು ಹೆಚ್ಚಾಗಿದೆ ಎಂದು ಅವರು ಹೇಳಿದ್ದಾರೆ.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶವಾಸಿಗಳಿಗೆ ಗುಡ್ ನ್ಯೂಸ್: GST ಸ್ಲ್ಯಾಬ್‌ಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಎರಡೇ ತೆರಿಗೆ

ನೀವೊಬ್ಬರು ಸಚಿವರು...ಹೀಗೆ ಕೇಳಿದ್ರೆ ಹೇಗೆ; ಸಚಿವ ತಿಮ್ಮಾಪುರ ವಿರುದ್ಧ ಡಿಕೆ.ಶಿವಕುಮಾರ್ ಗರಂ

ಸ್ವತಂತ್ರವಾಗಿ ಸ್ಪರ್ಧೆಗಿಳಿದರೂ ಗೆಲ್ಲಬಲ್ಲೆ, BJPಗೇಕೆ ಸೇರಲಿ..?: ಮಾಜಿ ಸಚಿವ ಕೆ.ಎನ್.ರಾಜಣ್ಣ

207 ಮೀಟರ್ ಎತ್ತರಕ್ಕೆ ಉಕ್ಕಿದ ಯಮುನೆ; ದೆಹಲಿಯ ತಗ್ಗು ಪ್ರದೇಶ, ಮಾರುಕಟ್ಟೆಗಳು ಜಲಾವೃತ

ನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರ?: ಹಾಸಿಗೆ, ದಿಂಬು ಬೇಡಿಕೆ ತೀರ್ಪು ಸೆ.9ಕ್ಕೆ ಕಾಯ್ದಿರಿಸಿದ ಕೋರ್ಟ್!

SCROLL FOR NEXT