ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ (ಸಾಂದರ್ಭಿಕ ಚಿತ್ರ) 
ದೇಶ

ನಮ್ಮನ್ನು ಬಿಟ್ಟು ಕಾಂಗ್ರೆಸ್ ಏನೂ ಮಾಡಲು ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿ

ಕಾಂಗ್ರೆಸ್ ತಮನ್ನು ಬಿಟ್ಟು ದೆಹಲಿಯಲ್ಲಿ ಏನೂ ಮಾಡಲು ಸಾಧ್ಯವಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪಶ್ಚಿಮ ಬಂಗಾಳ: ನಮನ್ನು ಬಿಟ್ಟು ಕಾಂಗ್ರೆಸ್ ದೆಹಲಿಯಲ್ಲಿ ಏನೂ ಮಾಡಲು ಸಾಧ್ಯವಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ  ಬ್ಯಾನರ್ಜಿ ಹೇಳಿದ್ದು, ಸಿಪಿಐಎಂ ಜೊತೆಗೆ ಕಾಂಗ್ರೆಸ್ ತಮ್ಮ ಸರ್ಕಾರವನ್ನು ಟೀಕಿಸುವಲ್ಲಿ ನಿರತವಾಗಿದೆ ಎಂದು  ಆರೋಪಿಸಿದ್ದಾರೆ.

ಕಾಂಗ್ರೆಸ್ ಮತ್ತು ಸಿಪಿಐ (ಎಂ) ಎರಡೂ ಒಂದೇ. ಇದು ಹೊಸ ವಿಚಾರವೇನಲ್ಲಾ. ಸಿಪಿಐ( ಎಂ) ಹೇಗೆ ಕಾಂಗ್ರೆಸ್ ಗೆ ಸಹಕಾರ ಕೊಡುತ್ತದೆ ಎಂಬುದನ್ನು ನಾನು ಬಲ್ಲೆ ಎಂದು ರಾಜ್ಯಪಾಲರ ಮೇಲಿನ ಭಾಷಣದ ವಂದನಾನಿರ್ಣಯದಲ್ಲಿ ಮಮತಾ ಬ್ಯಾನರ್ಜಿ ಹೇಳಿದರು.

ತೃಣಮೂಲ ಕಾಂಗ್ರೆಸ್ ದೂರ ಇಟ್ಟು ದೆಹಲಿ ಕಾಂಗ್ರೆಸ್  ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ರಾಜಸ್ತಾನದಲ್ಲಿ ಕಾಂಗ್ರೆಸ್ ಜಯಗಳಿಸಿರುವುದಕ್ಕೆ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಪಶ್ಟಿಮ ಬಂಗಾಳ ರಾಜ್ಯದ ಅಧಿವೇಶನ ಸಂದರ್ಭದಲ್ಲಿ  ಮಮತಾ ಬ್ಯಾನರ್ಜಿ ಮಾತನಾಡಬೇಕಿದ್ದರೆ, ಸಿಪಿಐ(ಎಂ) ಸದಸ್ಯರೊಂದಿಗೆ ಕಾಂಗ್ರೆಸ್  ಸದಸ್ಯರು ಸಭಾತ್ಯಾಗ ಮಾಡಿದ್ದರು.

ರಾಜ್ಯದಲ್ಲಿನ ಬೆಳವಣಿಗೆ ಬಗ್ಗೆ    ಪ್ರತಿಪಕ್ಷದವರು ರಚನಾತ್ಮಕ ವಿಮರ್ಶೆ ಮಾಡಲಿ.ಎಲ್ಲಾ ರಾಜ್ಯಗಳಂತೆ  ಪಶ್ಚಿಮ ಬಂಗಾಳ ಸರ್ಕಾರವೂ ಅಭಿವೃದ್ದಿಯೋಜನೆಗಳಿಗಾಗಿ ಶೇಕಡಾ 45 ರಷ್ಟು ಸಾಲ ಪಡೆದಿರುವುದಾಗಿ ಮಮತಾ ಬ್ಯಾನರ್ಜಿ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!