ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ (ಸಾಂದರ್ಭಿಕ ಚಿತ್ರ) 
ದೇಶ

ನಮ್ಮನ್ನು ಬಿಟ್ಟು ಕಾಂಗ್ರೆಸ್ ಏನೂ ಮಾಡಲು ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿ

ಕಾಂಗ್ರೆಸ್ ತಮನ್ನು ಬಿಟ್ಟು ದೆಹಲಿಯಲ್ಲಿ ಏನೂ ಮಾಡಲು ಸಾಧ್ಯವಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪಶ್ಚಿಮ ಬಂಗಾಳ: ನಮನ್ನು ಬಿಟ್ಟು ಕಾಂಗ್ರೆಸ್ ದೆಹಲಿಯಲ್ಲಿ ಏನೂ ಮಾಡಲು ಸಾಧ್ಯವಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ  ಬ್ಯಾನರ್ಜಿ ಹೇಳಿದ್ದು, ಸಿಪಿಐಎಂ ಜೊತೆಗೆ ಕಾಂಗ್ರೆಸ್ ತಮ್ಮ ಸರ್ಕಾರವನ್ನು ಟೀಕಿಸುವಲ್ಲಿ ನಿರತವಾಗಿದೆ ಎಂದು  ಆರೋಪಿಸಿದ್ದಾರೆ.

ಕಾಂಗ್ರೆಸ್ ಮತ್ತು ಸಿಪಿಐ (ಎಂ) ಎರಡೂ ಒಂದೇ. ಇದು ಹೊಸ ವಿಚಾರವೇನಲ್ಲಾ. ಸಿಪಿಐ( ಎಂ) ಹೇಗೆ ಕಾಂಗ್ರೆಸ್ ಗೆ ಸಹಕಾರ ಕೊಡುತ್ತದೆ ಎಂಬುದನ್ನು ನಾನು ಬಲ್ಲೆ ಎಂದು ರಾಜ್ಯಪಾಲರ ಮೇಲಿನ ಭಾಷಣದ ವಂದನಾನಿರ್ಣಯದಲ್ಲಿ ಮಮತಾ ಬ್ಯಾನರ್ಜಿ ಹೇಳಿದರು.

ತೃಣಮೂಲ ಕಾಂಗ್ರೆಸ್ ದೂರ ಇಟ್ಟು ದೆಹಲಿ ಕಾಂಗ್ರೆಸ್  ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ರಾಜಸ್ತಾನದಲ್ಲಿ ಕಾಂಗ್ರೆಸ್ ಜಯಗಳಿಸಿರುವುದಕ್ಕೆ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಪಶ್ಟಿಮ ಬಂಗಾಳ ರಾಜ್ಯದ ಅಧಿವೇಶನ ಸಂದರ್ಭದಲ್ಲಿ  ಮಮತಾ ಬ್ಯಾನರ್ಜಿ ಮಾತನಾಡಬೇಕಿದ್ದರೆ, ಸಿಪಿಐ(ಎಂ) ಸದಸ್ಯರೊಂದಿಗೆ ಕಾಂಗ್ರೆಸ್  ಸದಸ್ಯರು ಸಭಾತ್ಯಾಗ ಮಾಡಿದ್ದರು.

ರಾಜ್ಯದಲ್ಲಿನ ಬೆಳವಣಿಗೆ ಬಗ್ಗೆ    ಪ್ರತಿಪಕ್ಷದವರು ರಚನಾತ್ಮಕ ವಿಮರ್ಶೆ ಮಾಡಲಿ.ಎಲ್ಲಾ ರಾಜ್ಯಗಳಂತೆ  ಪಶ್ಚಿಮ ಬಂಗಾಳ ಸರ್ಕಾರವೂ ಅಭಿವೃದ್ದಿಯೋಜನೆಗಳಿಗಾಗಿ ಶೇಕಡಾ 45 ರಷ್ಟು ಸಾಲ ಪಡೆದಿರುವುದಾಗಿ ಮಮತಾ ಬ್ಯಾನರ್ಜಿ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

SCROLL FOR NEXT