ಮಹೇಂದ್ರಗಢ ಎಸ್'ಪಿ ಕಮಲ್ ದೀಪ್ 
ದೇಶ

ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ಪ್ರಕರಣ; ಮೂವರು ಆರೋಪಿಗಳ ಬಂಧನ

ಜಮ್ಮು ಮತ್ತು ಕಾಶ್ಮೀರದ ಇಬ್ಬರು ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ಹರಿಯಾಣ ರಾಜ್ಯದಲ್ಲಿ ಹಲ್ಲೆ ನಡೆದಿದ್ದು, ಪ್ರಕರಣ ಸಂಬಂಧ 6 ಮಂದಿ ಆರೋಪಿಗಳ ಪೈಕಿ ಮೂವರನ್ನು ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ...

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಇಬ್ಬರು ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ಹರಿಯಾಣ ರಾಜ್ಯದಲ್ಲಿ ಹಲ್ಲೆ ನಡೆದಿದ್ದು, ಪ್ರಕರಣ ಸಂಬಂಧ 6 ಮಂದಿ ಆರೋಪಿಗಳ ಪೈಕಿ ಮೂವರನ್ನು ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ. 
ಮಹೇಂದ್ರಗಢ ಎಂಬಲ್ಲಿ ನಿನ್ನೆ ಪ್ರಾರ್ಥನೆ ಮುಗಿಸಿ ಬರುತ್ತಿದ್ದ ಇಬ್ಬರು ವಿದ್ಯಾರ್ಥಿಗಳ ಮೇಲೆ ದುಷ್ಕರ್ಮಿಗಳ ಗುಂಪೊಂದು ಹಲ್ಲೆ ನಡೆಸಿದೆ. ಹಲ್ಲೆಗೊಳಗಾದ ಯುವಕರನ್ನು ಕೇಂದ್ರೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೆಂದು ಗುರ್ತಿಸಲಾಗಿದೆ. 
ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಮಹೇಂದ್ರಗಢ ಎಸ್'ಪಿ ಕಮಲ್ ದೀಪ್ ಅವರು, ಪ್ರಕರಣ ಸಂಬಂಧ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳನ್ನು ಗುರ್ತಿಸಿ ಮೂವರನ್ನು ಬಂಧನಕ್ಕೊಳಪಡಿಸಲಾಗಿದೆ. ಪ್ರಸ್ತುತ ತನಿಖೆ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ. 
ಘಟನೆಗ ತೀವ್ರ ಆಘಾತ ವ್ಯಕ್ತಪಡಿಸಿರುವ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರು ತನಿಖೆ ನಡೆಸಿ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರಿಗೆ ಮನವಿ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!