ಸಾಂದರ್ಭಿಕ ಚಿತ್ರ 
ದೇಶ

ಮಹರಾಷ್ಟ್ರ: ಕೇವಲ 1 ರುಪಾಯಿಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಕೇವಲ ಒಂದು ರುಪಾಯಿಗಾಗಿ ನಡೆದ ಜಗಳವೊಂದು 54 ವರ್ಷದ ವ್ಯಕ್ತಿಯ ಕೊಲೆಯಲ್ಲಿ ಅಂತ್ಯಗೊಂಡಿರುವ ದಾರುಣ ಘಟನೆ ಮಹಾರಾಷ್ಟ್ರದ ಥಾಣೆಯ....

ಥಾಣೆ: ಕೇವಲ ಒಂದು ರುಪಾಯಿಗಾಗಿ ನಡೆದ ಜಗಳವೊಂದು 54 ವರ್ಷದ ವ್ಯಕ್ತಿಯ ಕೊಲೆಯಲ್ಲಿ ಅಂತ್ಯಗೊಂಡಿರುವ ದಾರುಣ ಘಟನೆ ಮಹಾರಾಷ್ಟ್ರದ ಥಾಣೆಯ ಕಲ್ಯಾಣ ಟೌನ್ ನಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಮೃತ ಮನೋಹರ್ ಗಮ್ನೆ ಅವರು ಸಮೀಪದ ಅಂಗಡಿಯಲ್ಲಿ ಮೊಟ್ಟೆ ಖರೀದಿಸಲು ತೆರಳಿದ್ದರು. ಈ ವೇಳೆ ಒಂದು ರುಪಾಯಿಗಾಗಿ ಅಂಗಡಿ ಮಾಲೀಕ ಮತ್ತು ಮನೋಹರ್ ಮಧ್ಯೆ ಜಗಳ ಆರಂಭವಾಗಿದ್ದು, ಅದು ಕೊಲೆಯಲ್ಲಿ ಅಂತ್ಯಗೊಂಡಿದೆ ಎಂದು ಥಾಣೆ ಪೊಲೀಸ್ ಪಿಆರ್ ಒ ಸುಖದ ನರ್ಕರ್ ಅವರು ತಿಳಿಸಿದ್ದಾರೆ.
ಮನೋಹರ್ ಅವರು ಮೊಟ್ಟೆಗೆ ಒಂದು ರುಪಾಯಿ ಕಡಿಮೆ ಕೊಟ್ಟಿದ್ದರು. ಇದರಿಂದ ಆಕ್ರೋಶಗೊಂಡ ಅಂಗಡಿ ಮಾಲೀಕ ಮನೋಹರ್ ಅವರನ್ನು ನಿಂದಿಸಿದ್ದಾರೆ. ನಂತರ ಪುತ್ರನೊಂದಿಗೆ ವಾಪಸ್ ಬಂದ್ ಮನೋಹರ್ ಅಂಗಡಿ ಮಾಲೀಕನೊಂದಿಗೆ ಮತ್ತೊಂದು ಸುತ್ತಿನ ಜಗಳ ನಡೆಸಿದ್ದಾರೆ. ಈ ವೇಳೆ ಅಂಗಡಿ ಮಾಲೀಕನ ಪುತ್ರ ಮನೋಹರ್ ಗೆ ಒದ್ದು ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ ಎಂದು ನರ್ಕರ್ ಹೇಳಿದ್ದಾರೆ.
ಆರೋಪಿ ಸುಧಾಕರ್ ಪ್ರಭು(45) ಅವರನ್ನು ಬಂಧಿಸಿದ್ದು, ಆತನ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ನರ್ಕರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT