ಸಾಂದರ್ಭಿಕ ಚಿತ್ರ 
ದೇಶ

ಮಹರಾಷ್ಟ್ರ: ಕೇವಲ 1 ರುಪಾಯಿಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಕೇವಲ ಒಂದು ರುಪಾಯಿಗಾಗಿ ನಡೆದ ಜಗಳವೊಂದು 54 ವರ್ಷದ ವ್ಯಕ್ತಿಯ ಕೊಲೆಯಲ್ಲಿ ಅಂತ್ಯಗೊಂಡಿರುವ ದಾರುಣ ಘಟನೆ ಮಹಾರಾಷ್ಟ್ರದ ಥಾಣೆಯ....

ಥಾಣೆ: ಕೇವಲ ಒಂದು ರುಪಾಯಿಗಾಗಿ ನಡೆದ ಜಗಳವೊಂದು 54 ವರ್ಷದ ವ್ಯಕ್ತಿಯ ಕೊಲೆಯಲ್ಲಿ ಅಂತ್ಯಗೊಂಡಿರುವ ದಾರುಣ ಘಟನೆ ಮಹಾರಾಷ್ಟ್ರದ ಥಾಣೆಯ ಕಲ್ಯಾಣ ಟೌನ್ ನಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಮೃತ ಮನೋಹರ್ ಗಮ್ನೆ ಅವರು ಸಮೀಪದ ಅಂಗಡಿಯಲ್ಲಿ ಮೊಟ್ಟೆ ಖರೀದಿಸಲು ತೆರಳಿದ್ದರು. ಈ ವೇಳೆ ಒಂದು ರುಪಾಯಿಗಾಗಿ ಅಂಗಡಿ ಮಾಲೀಕ ಮತ್ತು ಮನೋಹರ್ ಮಧ್ಯೆ ಜಗಳ ಆರಂಭವಾಗಿದ್ದು, ಅದು ಕೊಲೆಯಲ್ಲಿ ಅಂತ್ಯಗೊಂಡಿದೆ ಎಂದು ಥಾಣೆ ಪೊಲೀಸ್ ಪಿಆರ್ ಒ ಸುಖದ ನರ್ಕರ್ ಅವರು ತಿಳಿಸಿದ್ದಾರೆ.
ಮನೋಹರ್ ಅವರು ಮೊಟ್ಟೆಗೆ ಒಂದು ರುಪಾಯಿ ಕಡಿಮೆ ಕೊಟ್ಟಿದ್ದರು. ಇದರಿಂದ ಆಕ್ರೋಶಗೊಂಡ ಅಂಗಡಿ ಮಾಲೀಕ ಮನೋಹರ್ ಅವರನ್ನು ನಿಂದಿಸಿದ್ದಾರೆ. ನಂತರ ಪುತ್ರನೊಂದಿಗೆ ವಾಪಸ್ ಬಂದ್ ಮನೋಹರ್ ಅಂಗಡಿ ಮಾಲೀಕನೊಂದಿಗೆ ಮತ್ತೊಂದು ಸುತ್ತಿನ ಜಗಳ ನಡೆಸಿದ್ದಾರೆ. ಈ ವೇಳೆ ಅಂಗಡಿ ಮಾಲೀಕನ ಪುತ್ರ ಮನೋಹರ್ ಗೆ ಒದ್ದು ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ ಎಂದು ನರ್ಕರ್ ಹೇಳಿದ್ದಾರೆ.
ಆರೋಪಿ ಸುಧಾಕರ್ ಪ್ರಭು(45) ಅವರನ್ನು ಬಂಧಿಸಿದ್ದು, ಆತನ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ನರ್ಕರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT