ಮಧುರೈ: ತಮಿಳುನಾಡಿನ ಇತಿಹಾಸ ಪ್ರಸಿದ್ಧ ದೇಗುಲ ಮೀನಾಕ್ಷಿ ದೇಗುಲದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಆಗ್ನಿಶಾಮಕ ದಳದ ಸಿಬ್ಬಂದಿಗಳು ದೇಗುಲಕ್ಕೆ ದೌಡಾಯಿಸಿದ್ದಾರೆ.
ದೇಗುಲದ ಆವರಣದಲ್ಲಿ ಸುಮಾರು ಐದಾರು ಆಂಗಡಿಗಳಿಗೆ ಬೆಂಕಿ ವ್ಯಾಪಿಸಿದ್ದು, ಅಗ್ನಿಶಾಮಕದಳದ ಒಟ್ಟು 5 ವಾಹನಗಳು ಮತ್ತು ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಈ ವರೆಗೂ ಅಗ್ನಿ ಅವಘಡದಲ್ಲಿ ಸಾವು-ನೋವುಗಳಾದ ಕುರಿತು ವರದಿಯಾಗಿಲ್ಲ. ಘಟನಾ ಸ್ಥಳಕ್ಕೆ ಮಧುರೈ ಜಿಲ್ಲಾಧಿಕಾರಿ ದೌಡಾಯಿಸಿದ್ದು, ಕಾರ್ಯಾಚರಣೆಯ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.
ಮೇಲ್ನೋಟಕ್ಕೆ ಅಗ್ನಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಹೇಳಲಾಗುತ್ತಿದ್ದು, ಕಾರ್ಯಾಚರಣೆ ಬಳಿಕ ಈ ಬಗ್ಗೆ ಸ್ಪಷ್ಟ ಮಾಹಿತಿ ಲಭಿಸುವ ಸಾಧ್ಯತೆ ಇದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.