ರಾಜ್ಯಸಭೆ ಪ್ರತಿಪಕ್ಷ ನಾಯಕ ಗುಲಾಮ್ ನಬೀ ಅಜಾದ್ ಅವರ (ಸಾಂದರ್ಭಿಕ ಚಿತ್ರ) 
ದೇಶ

2019ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರಸರ್ಕಾರಕ್ಕೆ ಕೀಳುಮಟ್ಟದ ಪ್ರಚಾರದ ಗೀಳು: ಕಾಂಗ್ರೆಸ್

2019ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೀಳುಮಟ್ಟದ ಪ್ರಚಾರದ ಗೀಳಿಗೆ ಗಂಟುಬಿದ್ದಿರುವ ಕೇಂದ್ರಸರ್ಕಾರ ಬೋಪೋರ್ಸ್ ಹಗರಣಕ್ಕೆ ಸಂಬಂಧಿಸಿದ ಮೇಲ್ಮನವಿಯನ್ನು ಸುಪ್ರೀಂಕೋರ್ಟಿಗೆ ಸಲ್ಲಿಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ

ನವದೆಹಲಿ:  2019ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೀಳುಮಟ್ಟದ ಪ್ರಚಾರದ ಗೀಳಿಗೆ ಗಂಟುಬಿದ್ದಿರುವ ಕೇಂದ್ರಸರ್ಕಾರ ಬೋಪೋರ್ಸ್ ಹಗರಣಕ್ಕೆ ಸಂಬಂಧಿಸಿದ ಮೇಲ್ಮನವಿಯನ್ನು  ಸುಪ್ರೀಂಕೋರ್ಟಿಗೆ ಸಲ್ಲಿಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ

ರಾಜಕೀಯವಾಗಿ ಸೂಕ್ಷ್ಮವಾಗಿರುವ ಈ ಪ್ರಕರಣ ಸಂಬಂಧ 2005ರಲ್ಲಿ ದೆಹಲಿ  ಹೈಕೋರ್ಟ್  ಎಲ್ಲಾ ಆರೋಪಿಗಳ ಮೇಲಿನ ಪ್ರಕರಣಗಳನ್ನೂ ರದ್ದುಗೊಳಿಸಿದ್ದರೂ ಸಿಬಿಐ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ. ಇದೊಂದು ಕೀಳುಮಟ್ಟದ ಪ್ರಚಾರ ಪಡೆಯುವ ತಂತ್ರವಾಗಿದೆ ಎಂದು ರಾಜ್ಯಸಭಾ ಪ್ರತಿಪಕ್ಷ ನಾಯಕ ಗುಲಾಮ್ ನಬಿ ಅಜಾದ್ ಹೇಳಿದ್ದಾರೆ.

ಸಿಬಿಐ, ಇಡಿ ಮೊದಲಾದ ಸರ್ಕಾರದ ಯಂತ್ರಗಳನ್ನು ಬಳಸಿಕೊಳ್ಳುವ ಮೂಲಕ ಪ್ರತಿಪಕ್ಷಗಳ ನಾಯಕರನ್ನು ಹಣಿಯಲು ಯತ್ನಿಸಲಾಗುತ್ತಿದೆ. ಆದರೆ, ಇದ್ಯಾವುದಕ್ಕೂ  ಬಗ್ಗುವುದಿಲ್ಲ. ಬಿಜೆಪಿ ವಿರುದ್ಧ ದಕ್ಷತೆಯೊಂದಿಗೆ ಹೋರಾಟ ನಡೆಸುವುದಾಗಿ ಅವರು ಹೇಳಿದ್ದಾರೆ.

ಬೋಪೋರ್ಸ್ ಹಗರಣದಲ್ಲಿ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಅವರ ಹೆಸರನ್ನು ಬಿಜೆಪಿ ತಳಕು ಹಾಕುತ್ತಿದೆ, ಆದರೆ,ಅದರಲ್ಲಿ ಸಫಲವಾಗದು ಎಂದು ಗುಲಾಮ್ ನಬಿ ಅಜಾದ್ ಹೇಳಿದ್ದಾರೆ.

ಶಸ್ತ್ರಸ್ತ್ರ ಉತ್ಪಾದನೆ ಸಂಬಂಧ ಭಾರತ ಮತ್ತು ಸ್ವಿಡನ್ ದೇಶದ ಎಬಿ ಬೋಪೋರ್ಸ್ ಕಂಪನಿ ನಡುವೆ ಮಾರ್ಚ್ 24 .1986ರಲ್ಲಿ ಒಪ್ಪಂದವಾಗಿತ್ತು.    ಭಾರತದ ರಾಜಕಾರಣಿಗಳು ಹಾಗೂ ರಕ್ಷಣಾ ಸಿಬ್ಬಂದಿಗಳಿಗೆ ಕಂಪನಿ ಲಂಚ ನೀಡಿದೆ ಎಂದು 1987ರಲ್ಲಿ ಸ್ವೀಡನ್ ರೇಡಿಯೋ ಆರೋಪಿಸಿತ್ತು.

 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT