ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾದವ್ ಅವರ (ಸಾಂದರ್ಭಿಕ ಚಿತ್ರ) 
ದೇಶ

ಮಾಣಿಕ್ ಸರ್ಕಾರ್ ನೇತೃತ್ವದ ಭ್ರಷ್ಟ, ಹಿಂಸಾತ್ಮಕ ಸರ್ಕಾರ : ಬಿಜೆಪಿ ಆರೋಪ

ದೇಶದ ಅತ್ಯಂತ ಬಡ ಮುಖ್ಯಮಂತ್ರಿ ಎಂದೇ ಹೆಸರಾಗಿರುವ ತ್ರಿಪುರಾದ ಮಾಣಿಕ್ ಸರ್ಕಾರ್ ನೇತೃತ್ವದ ಸರ್ಕಾರ ಭ್ರಷ್ಟ ಮತ್ತು ಹಿಂಸಾತ್ಮಕ ಸರ್ಕಾರ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾದೇವ್ ಆರೋಪಿಸಿದ್ದಾರೆ.

ಅಗರ್ತಲಾ:  ದೇಶದ ಅತ್ಯಂತ ಬಡ ಮುಖ್ಯಮಂತ್ರಿ ಎಂದೇ ಹೆಸರಾಗಿರುವ ತ್ರಿಪುರಾದ ಮಾಣಿಕ್ ಸರ್ಕಾರ್ ನೇತೃತ್ವದ ಸರ್ಕಾರ ಭ್ರಷ್ಟ ಮತ್ತು ಹಿಂಸಾತ್ಮಕ ಸರ್ಕಾರ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾದವ್  ಆರೋಪಿಸಿದ್ದಾರೆ.

ತ್ರಿಪುರಾ ರಾಜ್ಯದ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮಾಣಿಕ್ ಸರ್ಕಾರ್ ಮಾತ್ರ ಹುದ್ದೆ ಪಡೆದಿದ್ದು ಆ ರಾಜ್ಯದ ಉಳಿದೆಲ್ಲಾ ಜನ ಬಡತನ  ಹಾಗೂ ನಿರುದ್ಯೋಗ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

 25 ವರ್ಷಗಳಿಂದ ಸಿಪಿಐಎಂ ನ ದುರಾಡಳಿತದಿಂದ ತ್ರಿಪುರಾ ರಾಜ್ಯದ ಜನತೆ ಬೇಸತ್ತಿದ್ದು, ಅಭಿವೃದ್ಧಿ ಎಂಬುದು ಮರೀಚಿಕೆಯಾಗಿದೆ. ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಅಪಾದಿಸಿದ್ದಾರೆ.

ಫೆಬ್ರುವರಿ 18ರಂದು ತ್ರಿಪುರಾ ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದೆ. ಮಾರ್ಚ್ 3 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.ಸಿಪಿಐಎಂ ಕಳೆದ 25 ವರ್ಷಗಳಿಂದ ಆಡಳಿತ ನಡೆಸುತ್ತಿದ್ದು, ಮಾಣಿಕ್ ಸರ್ಕಾರ 19 ವರ್ಷಗಳಿಂದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT