ಕುರೀಪುಳ ಶ್ರೀಕುಮಾರ್ 
ದೇಶ

ಕೇರಳ: ಕವಿಯ ಮೇಲೆ ಹಲ್ಲೆ ಪ್ರಕರಣ, ಆರು ಆರ್ ಎಸ್ ಎಸ್ ಕಾರ್ಯಕರ್ತರ ಬಂಧನ

ಮಲಯಾಳಂ ಕವಿ ಕುರೀಪುಳ ಶ್ರೀಕುಮಾರ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಆರು ಆರ್ ಎಸ್ ಎಸ್ ಕಾರ್ಯಕರ್ತರನ್ನು ಕೇರಳದ ಕೊಲ್ಲಮ್ ನಲ್ಲಿ ಬಂಧಿಸಲಾಗಿದೆ.

ಕೊಲ್ಲಮ್: ಮಲಯಾಳಂ ಕವಿ ಕುರೀಪುಳ ಶ್ರೀಕುಮಾರ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಆರು ಆರ್ ಎಸ್ ಎಸ್ ಕಾರ್ಯಕರ್ತರನ್ನು ಕೇರಳದ ಕೊಲ್ಲಮ್ ನಲ್ಲಿ ಬಂಧಿಸಲಾಗಿದೆ.
ಸಂಘದ ಕಾರ್ಯಕರ್ತರಿಂದ  ಶ್ರೀಕುಮಾರ್ ನಿನ್ನೆ ತಡರಾತ್ರಿ ಹಲ್ಲೆಗೊಳಗಾಗಿದ್ದರು. ಅವರು ಕೊಚ್ಚಿ ಸಮೀಪ ವಡಾಯಂಬಾಡಿ ಜನರು ನಡೆಸುತ್ತಿರುವ ಹೋರಾಟದಲ್ಲಿ ಭಾಗವಹಿಸಿ ಮರಳುವ ಮೇಳೆ ಈ ಹಲ್ಲೆ ನಡೆದಿದೆ. ಶ್ರೀಕುಮಾರ್ ತಮ್ಮ ಭಾಷಣದುದ್ದಕ್ಕೂ ಹಿಂದುತ್ವವನ್ನು ಕಟು ಮಾತುಗಳಲ್ಲಿ ಟೀಕಿಸಿದ್ದರು.
ತಾನು ಗುಂಪೊಂದರಿಂದ ಹಲ್ಲೆಗೊಳಗಾದುದನ್ನು ಶ್ರೀಕುಮಾರ್ ಖಚಿತಪಡಿಸಿದ್ದು ಕೆಲ ಸ್ಥಳೀಯ ಜನರು ಕವಿ ಶ್ರೀಕುಮಾರ್ ಅವರನ್ನು ಹಲ್ಲೆಕೋರರಿಂದ ತಪ್ಪಿಸಿಕೊಳ್ಳಲು ಸಹಕರಿಸಿದ ನಂತರ ಅವರು ಕಾರನ್ನೇರಿ ಪ್ರಯಾಣ ಮುಂದುವರಿಸಿದ್ದರು.  ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಈ 'ಫಾಸಿಸ್ಟ್ ದಾಳಿ'ಯನ್ನು ಖಂಡಿಸಿದ್ದು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೋಲೀಸರಿಗೆ ಆದೇಶಿಸಿದ್ದಾರೆ.
ಘಟನೆ ಸಂಬಂಧ ಒಟ್ಟಾರೆ ಹದಿನೈದು ಮಂದಿಯ ವಿರುದ್ಧ ಪ್ರಕರಣ ದಾಕಲಾಗಿದ್ದು ಅದರಲ್ಲಿ ಆರು ಮಂದಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಇದು ಕೋಮುವಾದಿಗಳಿಂದಾದ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ಹಲ್ಲೆ ಎಂದು ಮಾಜಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ವಿ.ಎಂ. ಸುಧೀರನ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT