ಸಾಂದರ್ಭಿಕ ಚಿತ್ರ 
ದೇಶ

ಕಂಬಳ ಕ್ರೀಡೆಗೆ ನಿಷೇಧ ಕೋರಿ ಪೇಟಾ ಮನವಿ: ಫೆ.12ರಂದು ಸುಪ್ರೀಂ ವಿಚಾರಣೆ

ಕರ್ನಾಟಕದ ಸಾಂಪ್ರದಾಯಿಕ ಕ್ರೀಡೆಯಾದ ಎತ್ತಿನ ಓಟ ಕಂಬಳವನ್ನು ನಿಷೇಧಿಸಬೇಕೆಂದು ಪೇಟಾ ....

ನವದೆಹಲಿ: ಕರ್ನಾಟಕದ ಸಾಂಪ್ರದಾಯಿಕ ಕ್ರೀಡೆಯಾದ ಎತ್ತಿನ ಓಟ ಕಂಬಳವನ್ನು ನಿಷೇಧಿಸಬೇಕೆಂದು ಪೇಟಾ ಸಂಘಟನೆ ಸಲ್ಲಿಸಿರುವ ಮನವಿಯನ್ನು ಸುಪ್ರೀಂ ಕೋರ್ಟ್ ಇದೇ 12ರಂದು ವಿಚಾರಣೆ ನಡೆಸಲಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿಗಳಾದ ಎ.ಎಮ್.ಖನ್ವಿಲ್ಕರ್ ಮತ್ತು ಡಿ.ವೈ.ಚಂದ್ರಚೂಡ್ ಅವರನ್ನೊಳಗೊಂಡ ನ್ಯಾಯಪೀಠ ಪೇಟಾ ಸಂಘಟನೆ ಪರ ವಕೀಲ ಅರುಣಿಮಾ ಕೆಡಿಯಾ ಮನವಿ ಸಲ್ಲಿಸಿ ಶೀಘ್ರ ವಿಚಾರಣೆ ನಡೆಸುವಂತೆ ನಮೂದಿಸಿದರು.
ಕಂಬಳ ಕ್ರೀಡೆಯ ಪಾವಿತ್ರ್ಯತೆಯನ್ನು ಕಾಪಾಡುವಂತೆ ಕರ್ನಾಟಕ ಸರ್ಕಾರ ವಿಧೇಯಕವನ್ನು ಹೊರಡಿಸಿದೆ ಎಂದು ಕೆಡಿಯಾ ನ್ಯಾಯಾಲಯಕ್ಕೆ ತಿಳಿಸಿದರು.
ಕಂಬಳ ಕ್ರೀಡೆ ಆಚರಣೆಯನ್ನು ಮುಂದುವರಿಸುವ ಮಸೂದೆಯನ್ನು ಕರ್ನಾಟಕ ವಿಧಾನಸಭೆ ಅಂಗೀಕರಿಸಿದ್ದು ರಾಷ್ಟ್ರಪತಿಗಳಿಂದ ಒಪ್ಪಿಗೆ ಸಿಗಲು ಬಾಕಿಯಿದೆ ಎಂದು ಕೆಡಿಯಾ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಪೇಟಾ ಸಂಘಟನೆ ಸಲ್ಲಿಸಿದ್ದ ಮನವಿಗೆ ಮೂರು ವಾರಗಳೊಳಗೆ ಉತ್ತರಿಸುವಂತೆ ಕಳೆದ ಡಿಸೆಂಬರ್ 12ರಂದು ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ತಿಳಿಸಿದ್ದು, ಪೇಟಾ ಸಂಘಟನೆಗೆ 2 ವಾರಗಳೊಳಗೆ ಪ್ರತಿವಾದವನ್ನು ಮಂಡಿಸಲು ಕಾಲಾವಕಾಶ ನೀಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT