ಬಿಜೆಪಿ ನಾಯಕ ವಿನಯ್ ಕಟಿಯಾರ್ 
ದೇಶ

ಮುಸ್ಲಿಮರು ದೇಶ ಬಿಟ್ಟು ಹೋಗಬೇಕು: ವಿನಯ್ ಕಟಿಯಾರ್

ಧರ್ಮದ ಹೆಸರಿವಲ್ಲಿ ಮುಸ್ಲಿಮರು ದೇಶವನ್ನು ಇಬ್ಭಾಗಿಸುತ್ತಿದ್ದು, ಮುಸ್ಲಿಮರು ಭಾರತ ದೇಶವನ್ನು ಬಿಟ್ಟು ಹೋಗಬೇಕೆಂದು ಬಿಜೆಪಿ ನಾಯಕ ವಿನಯ್ ಕಟಿಯಾರ್ ಅವರು ಬುಧವಾರ ಹೇಳಿದ್ದಾರೆ...

ನವದೆಹಲಿ: ಧರ್ಮದ ಹೆಸರಿವಲ್ಲಿ ಮುಸ್ಲಿಮರು ದೇಶವನ್ನು ಇಬ್ಭಾಗಿಸುತ್ತಿದ್ದು, ಮುಸ್ಲಿಮರು ಭಾರತ ದೇಶವನ್ನು ಬಿಟ್ಟು ಹೋಗಬೇಕೆಂದು ಬಿಜೆಪಿ ನಾಯಕ ವಿನಯ್ ಕಟಿಯಾರ್ ಅವರು ಬುಧವಾರ ಹೇಳಿದ್ದಾರೆ. 
ಓವೈಸಿಯವರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ವಿನಯ್ ಕಟಿಯಾರ್ ಅವರು, ಮುಸ್ಲಿಮರು ಈ ದೇಶದಲ್ಲಿರಬಾರದು. ಧರ್ಮದ ಹೆಸರಿನಲ್ಲಿ ಮುಸ್ಲಿಮರು ದೇಶವನ್ನು ಇಬ್ಭಾಗ ಮಾಡುತ್ತಿದ್ದಾರೆ. ಹೀಗಿರುವಾಗ ಅವರು ದೇಶದಲ್ಲಿರುವ ಅಗತ್ಯವೇನಿದೆ? ಭಾರತದಲ್ಲಿರುವ ಮುಸ್ಲಿಮರು ಬಾಂಗ್ಲಾದೇಶ ಅಥವಾ ಪಾಕಿಸ್ತಾನಕ್ಕೆ ಹೋಗಬೇಕು. ಇಂದು ನಮ್ಮ ದೇಶದಲ್ಲಿ ಯಾವ ಕೆಲಸವನ್ನು ಅವರು ಮಾಡುತ್ತಿದ್ದಾರೋ, ಆ ಕೆಲಸವನ್ನು ಅವರು ಅಲ್ಲಿಯೇ ಮಾಡಲಿ ಎಂದು ಹೇಳಿದ್ದಾರೆ. 
ವಂದೇ ಮಾತರಂ ಹಾಗೂ ರಾಷ್ಟ್ರಧ್ವಜವನ್ನು ಗೌರವಿಸದವರನ್ನು ಶಿಕ್ಷಿಸುವ ಕಾನೂನು ಜಾರಿಯಾಗಬೇಕು. ಪಾಕಿಸ್ತಾನದ ಧ್ಜಜವನ್ನು ನಮ್ಮ ನೆಲದಲ್ಲಿ ಹಾರಿಸುವವರಿಗೆ ಶಿಕ್ಷೆಯನ್ನು ನೀಡಬೇಕೆಂದು ತಿಳಿಸಿದ್ದಾರೆ. 
ಇತ್ತೀಚೆಗಷ್ಟೇ ಹೇಳಿಕೆ ನೀಡಿದ್ದ ಓವೈಸಿಯವರು, ಭಾರತೀಯ ಮುಸ್ಲಿಮರನ್ನು 'ಪಾಕಿಸ್ತಾನಿ'ಗಳೆಂದು ಕರೆಯುವವರನ್ನು ಶಿಕ್ಷಿಸಬೇಕು. ಅಂತಹವರನ್ನು ಜೈಲಿಗಟ್ಟಬೇಕು. ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಬೇಕೆಂದು ಹೇಳಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ