ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ 
ದೇಶ

ಭಾರತೀಯ ಮುಸ್ಲಿಮರನ್ನು 'ಪಾಕಿಸ್ತಾನಿ'ಗಳೆಂದು ಕರೆಯುವವರನ್ನು ಶಿಕ್ಷಿಸಿ: ಓವೈಸಿ

ಭಾರತೀಯ ಮುಸ್ಲಿಮರನ್ನು 'ಪಾಕಿಸ್ತಾನಿ'ಗರು ಎಂದು ಕರೆಯುವವರನ್ನು ಜೈಲಿಗೆ ಹಾಕಬೇಕೆಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮಂಗಳವಾರ ಹೇಳಿದ್ದಾರೆ...

ಹೈದರಾಬಾದ್: ಭಾರತೀಯ ಮುಸ್ಲಿಮರನ್ನು 'ಪಾಕಿಸ್ತಾನಿ'ಗರು ಎಂದು ಕರೆಯುವವರನ್ನು ಜೈಲಿಗೆ ಹಾಕಬೇಕೆಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮಂಗಳವಾರ ಹೇಳಿದ್ದಾರೆ. 
ಲೋಕಸಭೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಧನ್ಯವಾದ ಹೇಳುವ ಭಾಷಣದಲ್ಲಿ ಮಾತನಾಡಿರುವ ಓವೈಸಿಯವರು, ಭಾರತೀಯ ಮುಸ್ಲಿಮರನ್ನು ಪಾಕಿಸ್ತಾನಿಗಳು ಎಂದು ಕರೆಯುವವರಿಗೆ ಶಿಕ್ಷೆ ನೀಡಬೇಕು. ಅಂತಹವರನ್ನು ಜೈಲಿಗಟ್ಟಬೇಕು. ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಬೇಕೆಂದು ಸರ್ಕಾರಕ್ಕೆ ತಿಳಿಸಿದ್ದಾರೆ. 
ಭಾರತೀಯ ಮುಸ್ಲಿಮರನ್ನು ಪಾಕಿಸ್ತಾನಿಗಳೆಂದು ಕರೆಯುವವರ ವಿರುದ್ಧ ಕಾನೂನು ಜಾರಿಗೆ ತರಬೇಕು. ಅಂತಹವರಿಗೆ ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ನೀಡಬೇಕು. ಆದರೆ. ಬಿಜೆಪಿ ನೇತೃತ್ವದ ಎನ್'ಡಿಎ ಸರ್ಕಾರ ಇಂತಹ ಕಾನೂನನ್ನು ಜಾರಿಗೆ ತರುವುದಿಲ್ಲ. ಭಾರತದಲ್ಲಿರುವ ಮುಸ್ಲಿಮರು ಮೊಹಮ್ಮದ್ ಅಲಿ ಜಿನ್ನಾರವರ ಎರಡು ರಾಷ್ಟ್ರಗಳ ಸಿದ್ಧಾಂತಗಳನ್ನು ತಿರಸ್ಕರಿಸಿದ್ದಾರೆಂದು ತಿಳಿಸಿದ್ದಾರೆ. 
ಇದೇ ವೇಳೆ ತ್ರಿವಳಿ ತಲಾಖ್ ಕುರಿತಂತೆ ಮಾತನಾಡಿರುವ ಓವೈಸಿ, ಸರ್ಕಾರದ ನಿರ್ಧಾರ ಮಹಿಳಾ ವಿರೋಧಿಯಾಗಿದೆ ಎಂದಿದ್ದಾರೆ.
ಕೇಂದ್ರ ಸರ್ಕಾರ ಪ್ರಸ್ತಾಪ ಮಾಡಿರುವ ತ್ರಿವಳಿ ತಲಾಖ್ ಮಸೂದೆ, ತ್ರಿವಳಿ ತಲಾಖ್ ನ್ನು ಕಾನೂನು ಬಾಹಿರವಾಗಿಸುತ್ತದೆ ಮತ್ತು ಅನೂರ್ಜಿತಗೊಳಿಸುತ್ತದೆ. 3 ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸುತ್ತದೆ. ಮಸೂದೆ ಲೋಕಸಭೆಯಲ್ಲಿ ಅಂಗೀಕಾರಗೊಂಡಿತ್ತಾದರೂ. ರಾಜ್ಯಸಭೆಯಲ್ಲಿ ವಿರೋಧಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದರಿಂದ ಅಂಗೀಕಾರಗೊಂಡಿಲ್ಲ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT