ಪಿ ಚಿದಂಬರಂ 
ದೇಶ

ಏರ್‌ಸೆಲ್‌–ಮ್ಯಾಕ್ಸಿಸ್‌ ಹಗರಣ: ಕರಡು ತನಿಖಾ ವರದಿ ಚಿದಂಬರಂ ಮನೆ ತಲುಪಿದ್ದು ಹೇಗೆ? ಸಿಬಿಐನಿಂದ ತನಿಖೆ

ಏರ್‌ಸೆಲ್‌ –ಮ್ಯಾಕ್ಸಿಸ್‌ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಿದ್ಧಪಡಿಸಿದ್ದ ತನಿಖಾ ವರದಿಯ ಕರಡು ಪ್ರತಿ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ....

ನವದೆಹಲಿ: ಏರ್‌ಸೆಲ್‌ –ಮ್ಯಾಕ್ಸಿಸ್‌ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಿದ್ಧಪಡಿಸಿದ್ದ ತನಿಖಾ ವರದಿಯ ಕರಡು ಪ್ರತಿ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಅವರ ಮನೆ ತಲುಪಿದ್ದು ಹೇಗೆ ಎಂಬುದರ ಕುರಿತು ಸಿಬಿಐ ಆಂತರಿಕೆ ತನಿಖೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚಿದಂಬರಂ ಮನೆ ಮೇಲೆ ದಾಳಿ ನಡೆಸಿದ್ದ ವೇಳೆ 2013ರಲ್ಲಿ ಸಿಬಿಐ ಸಿದ್ಧಪಿಡಿಸಿದ್ದ ತನಿಖಾ ವರದಿಯ ಕರಡು ಪ್ರತಿಯನ್ನು ಜಪ್ತಿ ಮಾಡಿತ್ತು. 
ಏರ್‌ಸೆಲ್‌ –ಮ್ಯಾಕ್ಸಿಸ್‌  ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಕುರಿತು ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು (ಇಡಿ) ಕಳೆದ ಜನವರಿ 13ರಂದು ದೆಹಲಿಯ ಜೋರ್ ಬಾಗ್ ನಲ್ಲಿರುವ ಚಿದಂಬರಂ ಅವರ ನಿವಾಸದ ಮೇಲೆ ದಾಳಿ ಮಾಡಿತ್ತು. ಈ ವೇಳೆ ಕೆಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಇಡಿ ಮೂಲಗಳು ತಿಳಿಸಿವೆ.
ಜನವರಿ 13ರಂದು ಇಡಿ ಅಧಿಕಾರಿಗಳು ದೆಹಲಿಯಲ್ಲಿರುವ ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ಚಿದಂಬರಂ ಅವರ ನಿವಾಸ ಮತ್ಕು ಕಚೇರಿ ಮೇಲೆ ದಾಳಿ ನಡೆಸಿತ್ತು.  ಅಲ್ಲದೆ ಕಾರ್ತಿ ಚಿದಂಬರಂ ಅವರ ಚೆನ್ನೈಯಲ್ಲಿರುವ ಆಪ್ತ ಸಹಾಯಕ ಮತ್ತು ಲೆಕ್ಕ ಪರಿಶೋಧಕರ ಮನೆಗಳಲ್ಲೂ ಶೋಧ ನಡೆಸಿದ್ದರು.
ಚಿದಂಬರಂ ಅವರ ನಿವಾಸದಲ್ಲಿ ಪತ್ತೆಯಾದ ಕರಡು ಪ್ರತಿ ಬಗ್ಗೆ ಇಡಿ ಅಧಿಕಾರಿಗಳು ಸಿಬಿಐಗೆ ಮಾಹಿತಿ ನೀಡಿದ್ದು, ತನಿಖಾ ವರದಿ ಸೋರಿಕೆಯಾಗಿದ್ದು ಹೇಗೆ ಎಂಬುದುರ ಕುರಿತು ಈಗ ಸಿಬಿಐ ಆಂತರಿಕ ತನಿಖೆ ನಡೆಸುತ್ತಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ.
ಇನ್ನು ಈ ಬಗ್ಗೆ ಯಾವುದೇ ಹೇಳಿಕೆ ನೀಡಲು ಪಿ.ಚಿದಂಬರಂ ಅವರು ನಿರಾಕರಿಸಿದ್ದು, ಈ ಹಿಂದೆ ಇಡಿ ದಾಳಿ ನಡೆಸಿದಾಗ, ಅಧಿಕಾರಿಗಳಿಗೆ ಮನೆಯಲ್ಲಿ ಏನೂ ಸಿಗದ ಕಾರಣ ಮುಜುಗರಗೊಂಡು ಕ್ಷಮೆಯಾಚಿಸಿ ತೆರಳಿದ್ದಾರೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT