ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ 
ದೇಶ

ಪಾಕ್ ಗುಂಡಿನ ದಾಳಿಗೆ ನಮ್ಮ ಯೋಧರು ಸಾಯುತ್ತಿದ್ದರೆ, ಸರ್ಕಾರ ಪಕೋಡ ಬಗ್ಗೆ ಮಾತನಾಡುತ್ತಿದೆ: ಶಿವಸೇನೆ

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಪಕೋಡ ಹೇಳಿಕೆಗೆ ಸಂಬಂಧಿಸಿದಂತೆ ಮಿತ್ರ ಪಕ್ಷ ಶಿವಸೇನೆ ಗುರುವಾರ....

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಪಕೋಡ ಹೇಳಿಕೆಗೆ ಸಂಬಂಧಿಸಿದಂತೆ ಮಿತ್ರ ಪಕ್ಷ ಶಿವಸೇನೆ ಗುರುವಾರ ತೀವ್ರ ವಾಗ್ದಾಳಿ ನಡೆಸಿದ್ದು, ಗಡಿಯಲ್ಲಿ ಪಾಕಿಸ್ತಾನ ಗುಂಡಿನ ದಾಳಿಗೆ ನಮ್ಮ ಯೋಧರು ಸಾಯುತ್ತಿದ್ದರೆ ಸರ್ಕಾರ ಪಕೋಡ ಬಗ್ಗೆ ಮಾತನಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿ ಸೇರಿದಂತೆ ಪ್ರಮುಖ ವಿಷಯಗಳಿಂದ ಜನರ ಗಮನ ಬೇರೆ ಕಡೆ ಸೆಳೆಯಲು ಮೋದಿ ಸರ್ಕಾರ ಯತ್ನಿಸುತ್ತಿದೆ ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿ ಆರೋಪಿಸಿದೆ.
ಪಾಕಿಸ್ತಾನವನ್ನು 'ಸೋಲಿಸಿ' ಮತ್ತು 'ವಿಭಜಿಸಿದ್ದಕ್ಕೆ' ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಶ್ಲಾಘಿಸಿದ ಶಿವಸೇನೆ, ಕಳೆದ ನಾಲ್ಕು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಮೋದಿ ಸರ್ಕಾರ ಕಾಶ್ಮೀರ ವಿವಾದ ಬಗೆಹರಿಸುವಲ್ಲಿ ವಿಫಲವಾಗಿದೆ ಎಂದು ಹೇಳಿದೆ.
ಕಾಂಗ್ರೆಸ್ ಗೆ ಪಾಕಿಸ್ತಾನಕ್ಕೆ ಪಾಠ ಕಲಿಸುವ ಧೈರ್ಯ ಇಲ್ಲ. ಆದರೆ ಇಂದಿರಾ ಗಾಂಧಿ ಅವರು ಪಾಕಿಸ್ತಾನಕ್ಕೆ ಅಮೆರಿಕದ ಬೆಂಬಲ ಇದ್ದರೂ ಅದನ್ನು ಸೋಲಿಸಿದ್ದರು ಮತ್ತು ಆ ದೇಶ ಇಬ್ಭಾಗ ಮಾಡಿದ್ದರು ಎಂದು ಶಿವಸೇನೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT