ನೀತಿ ಆಯೋಗದ ಉಪಾಧ್ಯಕ್ಷ ರವಿಕುಮಾರ್ (ಸಾಂದರ್ಭಿಕ ಚಿತ್ರ) 
ದೇಶ

ಮೋದಿಕೇರ್ -ಎರಡು ತಿಂಗಳೊಳಗೆ ನೀತಿ ಆಯೋಗದಿಂದ ನೀಲಿನಕ್ಷೆ ತಯಾರಿ

ಎರಡು ತಿಂಗಳೊಳಗೆ ಮೋದಿಕೇರ್ ನೀಲಿನಕ್ಷೆ ರೂಪಿಸುವತ್ತ ನೀತಿ ಆಯೋಗ ಮುಂದಾಗಿದೆ. ಎರಡು ತಿಂಗಳೊಳಗೆ ವರದಿ ಸಲ್ಲಿಕೆಯಾಗಲಿದೆ ಎಂದು ಕೇಂದ್ರ ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನವದೆಹಲಿ:  ಕೇಂದ್ರಸರ್ಕಾರದ ಮಹತ್ವಾಕಾಂಕ್ಷಿ ರಾಷ್ಟ್ರೀಯ ಆರೋಗ್ಯ ರಕ್ಷಣಾ ಯೋಜನೆಗೆ ಬಜೆಟ್ ನಲ್ಲಿ ಕಡಿಮೆ ಪ್ರಮಾಣದ ಹಣ ಮೀಸಲಿರಿಸಲಾಗಿದೆ ಎಂಬ ತೀವ್ರ ಟೀಕೆಗಳ ಬೆನ್ನಲ್ಲೇ ಎರಡು ತಿಂಗಳೊಳಗೆ ಮೋದಿಕೇರ್ ನೀಲಿನಕ್ಷೆ ರೂಪಿಸುವತ್ತ ನೀತಿ ಆಯೋಗ ಮುಂದಾಗಿದೆ.

ವಿಮಾ ನೀಲಿನಕ್ಷೆ ರೂಪಿಸುವಲ್ಲಿ ನೀತಿ ಆಯೋಗ ಕಾರ್ಯೋನ್ಮುಖವಾಗಿದೆ . ಎರಡು ತಿಂಗಳೊಳಗೆ ವರದಿ ಸಲ್ಲಿಕೆಯಾಗಲಿದೆ ಎಂದು ಕೇಂದ್ರ ಹಣಕಾಸು ಇಲಾಖೆಯ  ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಯೋಜನೆಯ ಪೂರ್ಣ ವೆಚ್ಚ, ನಿಧಿಯ ಮಾದರಿ, ಒಟ್ಟಾರೇ, ಮಾನವ ಸಂಪನ್ಮೂಲ , ದೇಶದಲ್ಲಿರುವ ಆರೋಗ್ಯ ಸಂಬಂಧಿತ ಮೂಲಕೌರ್ಯಸೌಕರ್ಯ ಸೇರಿದಂತೆ ಎಲ್ಲಾ ವಿಷಯಗಳ ಕುರಿತು ರಾಜ್ಯಗಳನ್ನೊಳಗೊಂಡ ನೀಲಿನಕ್ಷೆ ರೂಪಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ರಾಷ್ಟ್ರೀಯ ಸ್ವಾಸ್ಥ ಭೀಮಾ ಯೋಜನೆಗೆ ಸಂಬಂಧಿಸಿದ ಪ್ರತ್ಯೇಕ ವರದಿಯನ್ನು ಆಯೋಗ ನೀಡಲಿದೆ.ಇದರಿಂದ ಅಲ್ಪ ಅವಧಿಯಲ್ಲಿ ಪರಿಣಾಮಕಾರಿಯಾಗಿ ಯೋಜನೆ ಅನುಷ್ಠಾನಗೊಳಿಸಲು ನೆರವಾಗಲಿದೆ ಎಂದು ಅವರು ತಿಳಿಸಿದ್ದಾರೆ.

2018-19ರ ಅವಧಿಯಲ್ಲಿ ರಾಷ್ಟ್ರೀಯ ಸ್ವಾಸ್ಥ ಭೀಮಾ ಯೋಜನೆಗಾಗಿ ಸರ್ಕಾರ 2 ಸಾವಿರ ಕೋಟಿ ರೂಪಾಯಿ ಮೀಸಲಿಟ್ಟಿದೆ.ಇದಲ್ಲದೇ, ರಾಷ್ಟ್ರೀಯ ಆರೋಗ್ಯ ರಕ್ಷಣಾ ಯೋಜನೆ ನಿಧಿಯನ್ನು  ಬಳಸಿಕೊಳ್ಳಲಾಗುತ್ತಿದೆ. ಆದಾಗ್ಯೂ,10 ಕೋಟಿ ಕುಟುಂಬಗಳ 50 ಕೋಟಿ
ಫಲಾನುಭವಿಗಳಿಗೆ ಯೋಜನಾ ಅನುಷ್ಠಾನಕ್ಕಾಗಿ 10 ಸಾವಿರದಿಂದ 12 ಸಾವಿರ ಕೋಟಿ ರೂಪಾಯಿ ಅಗತ್ಯವಿದೆ ಎಂದು ಅಂದಾಜು ವೆಚ್ಚ ಮಾಡಲಾಗಿದೆ.

 ಖಾಸಗಿ ಆಸ್ಪತ್ರೆಗಳು ಮತ್ತು ಯೋಜನೆಗಳನ್ನೊಳಗೊಂಡಂತೆ ಸಾರ್ವಜನಿಕ - ಖಾಸಗಿ ಸಹಭಾಗಿತ್ವದ ನೀಲಿನಕ್ಷೆಯನ್ನೂ ಸಹ ಈ ವರದಿ ನೀಡಲಿದೆ. ವರದಿ ಬಂದ ನಂತರ ಆರೋಗ್ಯ ಸಂಬಂಧಿತ ಮೂಲಸೌಕರ್ಯಗಳ ಕೊರತೆ ಇರುವ ಹಿಂದುಳಿದಿರುವ
ರಾಜ್ಯಗಳಲ್ಲಿ  ನೀತಿ ಆಯೋಗ ಜೊತೆಯಾಗಿ ಕಾರ್ಯನಿರ್ವಹಿಸಲಿದೆ. ನಂತರ ಇದೇ ಮಾದರಿಯನ್ನು ಇತರ ರಾಜ್ಯಗಳಿಗೂ ಅನ್ವಯಿಸಲಾಗುತ್ತದೆ ಎಂಬುದು ಉನ್ನತ ಮಾಹಿತಿಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!